• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಪೋಷಕ ಪಟ್ಟ ಕಳಚಿಕೊಳ್ಳಲು ಪಾಕ್ ನಿರ್ಧಾರ?: ಉಗ್ರ ಸಂಘಟನೆಗಳ ನಿಷೇಧಕ್ಕೆ ಸಿದ್ಧತೆ

TNN Correspondent Posted On April 8, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಯೋತ್ಪಾದಕರನ್ನು ಸಲಹುತ್ತಿರುವ ಆರೋಪ ಹೊತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ಪೋಷಕ ಎಂಬ ಹಣೆಪಟ್ಟಿ ಕಳಚಿಕೊಳ್ಳಲು ಹಲವು ಬಾರಿ ನಾಟಕಗಳನ್ನು ಮಾಡಿದೆ. ಆದರೆ ಇದೀಗ ಮತ್ತೊಮ್ಮೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕರಡು ವಿಧೇಯಕ ರೂಪಿಸುತ್ತಿದೆ ಎನ್ನಲಾಗಿದೆ.
ಗೃಹಸಚಿವಾಲಯದ ನಿಗಾ ಪಟ್ಟಿಯಲ್ಲಿರುವ ಕೆಲವು ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ನಿಷೇಧಿಸಿದ ಅಧ್ಯಕ್ಷರ ಸುಗ್ರೀವಾಜ್ಞೆಯ ಬದಲಿಗೆ ಈ ವಿಧೇಯಕ ತರಲಾಗುತ್ತಿದೆ. ಭಯೋತ್ಪಾದನಾ ನಿಗ್ರಹ ದಳ 1997ರ ತಿದ್ದುಪಡಿ ಕರಡು ವಿಧೇಯಕವನ್ನು ಏ.9ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿದೆ ಎಂದು ಪಾಕಿಸ್ತಾನ ಪ್ರಮುಖ ಪತ್ರಿಕೆ ಡಾನ್ ವರದಿ ಮಾಡಿದೆ. ಪ್ರಸ್ತಾವಿತ ಕರಡು ವಿಧೇಯಕವನ್ನು ಪರಿಶೀಲಿಸಲು ಕಾನೂನು ಸಚಿವಾಲಯ ಮತ್ತು ಪಾಕ್‌ ಸೇನೆಯ ಆಡಳಿತ ಮಂಡಳಿ ಕೂಡ ವಿಧೇಯಕ ರಚನೆಯ ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರನ್ನು ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಹಾಗೂ ಜರ್ಮನಿಯ ಜಂಟಿ ಪ್ರಸ್ತಾಪಕ್ಕೆ ಹಣಕಾಸು ಕಾರ್ಯಪಡೆ ಅನುಮೋದನೆ ನೀಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ವರ್ಚಸ್ಸಿಗೆ ಆಗುವ ಧಕ್ಕೆಯನ್ನು ತಡೆಯುವ ಉದ್ದೇಶದಿಂದ ಭಯೋತ್ಪಾದಕ ನಿಗ್ರಹ ಕಾಯಿದೆಗೆ ತಿದ್ದುಪಡೆ ಕರಡು ವಿಧೇಯಕ ಮಂಡಿಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ. ಆದರೆ ಅದು ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬ ಅನುಮಾನಗಳು ವಿಶ್ವಸಮುದಾಯಕ್ಕಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search