• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಪೋಷಕ ಪಟ್ಟ ಕಳಚಿಕೊಳ್ಳಲು ಪಾಕ್ ನಿರ್ಧಾರ?: ಉಗ್ರ ಸಂಘಟನೆಗಳ ನಿಷೇಧಕ್ಕೆ ಸಿದ್ಧತೆ

TNN Correspondent Posted On April 8, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಯೋತ್ಪಾದಕರನ್ನು ಸಲಹುತ್ತಿರುವ ಆರೋಪ ಹೊತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ಪೋಷಕ ಎಂಬ ಹಣೆಪಟ್ಟಿ ಕಳಚಿಕೊಳ್ಳಲು ಹಲವು ಬಾರಿ ನಾಟಕಗಳನ್ನು ಮಾಡಿದೆ. ಆದರೆ ಇದೀಗ ಮತ್ತೊಮ್ಮೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕರಡು ವಿಧೇಯಕ ರೂಪಿಸುತ್ತಿದೆ ಎನ್ನಲಾಗಿದೆ.
ಗೃಹಸಚಿವಾಲಯದ ನಿಗಾ ಪಟ್ಟಿಯಲ್ಲಿರುವ ಕೆಲವು ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ನಿಷೇಧಿಸಿದ ಅಧ್ಯಕ್ಷರ ಸುಗ್ರೀವಾಜ್ಞೆಯ ಬದಲಿಗೆ ಈ ವಿಧೇಯಕ ತರಲಾಗುತ್ತಿದೆ. ಭಯೋತ್ಪಾದನಾ ನಿಗ್ರಹ ದಳ 1997ರ ತಿದ್ದುಪಡಿ ಕರಡು ವಿಧೇಯಕವನ್ನು ಏ.9ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿದೆ ಎಂದು ಪಾಕಿಸ್ತಾನ ಪ್ರಮುಖ ಪತ್ರಿಕೆ ಡಾನ್ ವರದಿ ಮಾಡಿದೆ. ಪ್ರಸ್ತಾವಿತ ಕರಡು ವಿಧೇಯಕವನ್ನು ಪರಿಶೀಲಿಸಲು ಕಾನೂನು ಸಚಿವಾಲಯ ಮತ್ತು ಪಾಕ್‌ ಸೇನೆಯ ಆಡಳಿತ ಮಂಡಳಿ ಕೂಡ ವಿಧೇಯಕ ರಚನೆಯ ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರನ್ನು ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಹಾಗೂ ಜರ್ಮನಿಯ ಜಂಟಿ ಪ್ರಸ್ತಾಪಕ್ಕೆ ಹಣಕಾಸು ಕಾರ್ಯಪಡೆ ಅನುಮೋದನೆ ನೀಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ವರ್ಚಸ್ಸಿಗೆ ಆಗುವ ಧಕ್ಕೆಯನ್ನು ತಡೆಯುವ ಉದ್ದೇಶದಿಂದ ಭಯೋತ್ಪಾದಕ ನಿಗ್ರಹ ಕಾಯಿದೆಗೆ ತಿದ್ದುಪಡೆ ಕರಡು ವಿಧೇಯಕ ಮಂಡಿಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ. ಆದರೆ ಅದು ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬ ಅನುಮಾನಗಳು ವಿಶ್ವಸಮುದಾಯಕ್ಕಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search