• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಬಂದ್ ಹಿಂದೆ ಇತ್ತು ಷಡ್ಯಂತ್ರ, ಮೋದಿ ಹಣೆಯಲು ಪ್ರತಿಪಕ್ಷಗಳು ಮಾಡಿದವೇ ಕುತಂತ್ರ?

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಭಾರತ್ ಬಂದ್ ಹೆಸರಿನಲ್ಲಿ ನಡೆಸಿದ ಹಿಂಸಾಚಾರದ ಹಿಂದೆ ಷಡ್ಯಂತ್ರ ಇದೆ ಎಂದು ಮಧ್ಯಪ್ರದೇಶ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಇದರ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆಯೇ ಎಂಬ ಅನುಮಾನ ಮೂಡಿದೆ.

ಈ ಕುರಿತು ಗುಪ್ತಚರ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಏಪ್ರಿಲ್ ಎರಡರಂದು ದೇಶದ ಹಲವೆಡೆ ಬಂದ್ ಹೆಸರಿನಲ್ಲಿ ನಡೆಸಿದ ಹಿಂಸಾಚಾರ ಪೂರ್ವ ನಿಯೋಜಿತವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸುಮಾರು 35 ಸಂಘಟನೆಗಳು ಮತ್ತು ಅವುಗಳಿಗೆ ಅಪಾರ ಹಣ, ಲಾಠಿ, ಪೋಸ್ಟರ್ ಸೇರಿ ಹಲವು ವಸ್ತುಗಳನ್ನು ನೀಡಿದ್ದು, ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ, ಈ ಷಡ್ಯಂತ್ರದಿಂದ ಹಿಂಸೆಯ ರೂಪ ಪಡೆಯಿತು ಎಂದು ವರದಿಯಲ್ಲಿ ಬಹಿರಂಗಗೊಳಿಸಿದೆ.

ಅಲ್ಲದೆ ಅಂಬೇಡ್ಕರ್ ಮೂರ್ತಿ ಧ್ವಂಸ ಸೇರಿ ಹಲವು ಹಿಂಸಾತ್ಮಕ ಕೃತ್ಯ ಎಸಗಲು ಪೊಲೀಸರ ಸಹಕಾರ ಸಹ ಪಡೆಯಲಾಗಿದೆ. ಹಾಗಾಗಿಯೇ ಬಂದ್ ಹಿಂಸೆಯ ರೂಪ ಪಡೆದು 9 ಮಂದಿ ಮೃತಪಟ್ಟು ಕೋಟ್ಯಂತರ ರೂಪಾಯಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಲು ಕಾರಣವಾಯಿತು ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರದ ರೂಪ ಪಡೆದು 9 ಜನ ಮೃತಪಟ್ಟಿದ್ದರು. ಮಧ್ಯಪ್ರದೇಶವೊಂದರಲ್ಲೇ 8 ಜನ ಮೃತಪಟ್ಟಿದ್ದರು.

ಆದಾಗ್ಯೂ, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹಿಂದೆ ಪ್ರತಿಪಕ್ಷಗಳ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸುತ್ತಿರುವ ಬೆನ್ನಲ್ಲೇ, ಗುಪ್ತಚರ ಇಲಾಖೆ ಷಡ್ಯಂತ್ರ ಇದೆ ಎಂದು ತಿಳಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search