• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಉಗ್ರ ವಾನಿ ಮತ್ತು ಪಾಕ್ ಧ್ವಜದ ಭಾವಚಿತ್ರದ ಟೀ ಶರ್ಟ್

TNN Correspondent Posted On April 9, 2018
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕವಾದಿಗಳು ಮತ್ತು ಪಾಕ್ ಪೋಷಿತ ಭಯೋತ್ಪಾದಕ ಉಪಟಳ ಮಿರಿ ಮೀರಿದ್ದು, ಅದನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದೆಲ್ಲದರ ಮಧ್ಯೆ ಕಂಗೆಟ್ಟಿರುವ ಪ್ರತ್ಯೇಕವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಮುಂದುವರಿಸಿದ್ದು, ಯುವಕರ ತಲೆ ಕೆಡಿಸಿ ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಇತ್ತೀಚೆಗೆ ಉಗ್ರರ ದಾಳಿಯ ವೇಳೆ ನಾಗರೀಕ ಮೃತಪಟ್ಟಿದ್ದನ್ನೇ ನೆಪವಾಗಿಟ್ಟುಕೊಂಡು ಕಲ್ಲು ತೂರಾಟ ಆರಂಭಿಸಿರುವ ಪ್ರತ್ಯೇಕವಾದಿಗಳ ಪ್ರೇರಿತರು ಇದೀಗ ಮತ್ತೊಮ್ಮೆ ದೇಶವಿರೋಧಿ ವರ್ತನೆಯನ್ನು ಬಹಿರಂಗವಾಗಿ ತೋರಿದ್ದಾರೆ.

ಕಳೆದ ವರ್ಷ ಭಾರತೀಯ ಸೈನಿಕರ ಗುಂಡಿಗೆ ಬಲಿಯಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿಯನ್ನು ಆರಾಧಿಸುವ ಚಾಳಿಯನ್ನು ಪ್ರತ್ಯೇಕವಾದಿಗಳು ಮುಂದುವರಿಸಿದ್ದಾರೆ. ಕೆಲ ದಿನಗಳಿಂದ ನಡೆಯುತ್ತಿರುವ ಕಲ್ಲು ತೂರಾಟದ ವೇಳೆಯಲ್ಲಿ ಕೆಲವು ಭಯೋತ್ಪಾದಕರ ಬೆಂಬಲಿಗರು ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸದಸ್ಯ, ಉಗ್ರ ಬುರ್ಹಾನ್ ವಾನಿ ಮತ್ತು ಪಾಕಿಸ್ತಾನದ ಭಾವಚಿತ್ರವಿರುವ ಟೀ ಶರ್ಟ್ ಗಳನ್ನು ಧರಿಸಿ, ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕಿವೆ.

ಈ ಮೂಲಕ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ಬುರ್ಹಾನ್ ವಾನಿಯನ್ನು ಮಹಾನ್ ಹೋರಾಟಗಾರನೆಂಬಂತೆ ಬಿಂಬಿಸಿ, ಯುವಕರನ್ನು ಸೆಳೆಯಲು ಪಾಕ್ ಮೂಲಕ ಭಯೋತ್ಪಾದಕ ಸಂಘಟನೆಗಳು ಮತ್ತು ಪ್ರತ್ಯೇಕವಾದದ ಹೆಸರಲ್ಲಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಪ್ರತ್ಯೇಕವಾದಿಗಳು ಪ್ರಯತ್ನಿಸುತ್ತಿರುವ ಅಂಶ ಸಾಭೀತಾಗಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ಕಣಿವೆ ರಾಜ್ಯಗಳಲ್ಲಿ ಉಂಟಾಗುತ್ತಿರುವ ನಿರಂತರ ಗಲಭೆ, ಕಲ್ಲು ತೂರಾಟಗಳನ್ನು ನಿಯಂತ್ರಿಸಲು ನಿರಂತರವಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದರು. ಅಲ್ಲದೇ ನೋಟ್ಯಂತರ, ತೆರಿಗೆ ಇಲಾಖೆ ದಾಳಿಯಿಂದ ಪ್ರತ್ಯೇಕವಾದಿಗಳಿಗೆ ಹಣದ ಅಭಾವ ಉಂಟಾಗಿತ್ತು. ಕೇಂದ್ರದ ನಿರ್ಧಾರಗಳಿಂದ ವಿಚಲಿತವಾಗಿರುವ ಪ್ರತ್ಯೇಕವಾದಿಗಳು ಹಲವು ಅಡ್ಡ ಮಾರ್ಗಗಳನ್ನು ಹಿಡಿದು, ಹಿಂಸೆಗೆ ಪ್ರಚೋಧನೆ ನೀಡುತ್ತಿರುವುದು ಈ ಮೂಲಕ ಸಾಬೀತಾಗುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search