• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಉಗ್ರ ವಾನಿ ಮತ್ತು ಪಾಕ್ ಧ್ವಜದ ಭಾವಚಿತ್ರದ ಟೀ ಶರ್ಟ್

TNN Correspondent Posted On April 9, 2018


  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕವಾದಿಗಳು ಮತ್ತು ಪಾಕ್ ಪೋಷಿತ ಭಯೋತ್ಪಾದಕ ಉಪಟಳ ಮಿರಿ ಮೀರಿದ್ದು, ಅದನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದೆಲ್ಲದರ ಮಧ್ಯೆ ಕಂಗೆಟ್ಟಿರುವ ಪ್ರತ್ಯೇಕವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿ ಮುಂದುವರಿಸಿದ್ದು, ಯುವಕರ ತಲೆ ಕೆಡಿಸಿ ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಇತ್ತೀಚೆಗೆ ಉಗ್ರರ ದಾಳಿಯ ವೇಳೆ ನಾಗರೀಕ ಮೃತಪಟ್ಟಿದ್ದನ್ನೇ ನೆಪವಾಗಿಟ್ಟುಕೊಂಡು ಕಲ್ಲು ತೂರಾಟ ಆರಂಭಿಸಿರುವ ಪ್ರತ್ಯೇಕವಾದಿಗಳ ಪ್ರೇರಿತರು ಇದೀಗ ಮತ್ತೊಮ್ಮೆ ದೇಶವಿರೋಧಿ ವರ್ತನೆಯನ್ನು ಬಹಿರಂಗವಾಗಿ ತೋರಿದ್ದಾರೆ.

ಕಳೆದ ವರ್ಷ ಭಾರತೀಯ ಸೈನಿಕರ ಗುಂಡಿಗೆ ಬಲಿಯಾಗಿದ್ದ ಭಯೋತ್ಪಾದಕ ಬುರ್ಹಾನ್ ವನಿಯನ್ನು ಆರಾಧಿಸುವ ಚಾಳಿಯನ್ನು ಪ್ರತ್ಯೇಕವಾದಿಗಳು ಮುಂದುವರಿಸಿದ್ದಾರೆ. ಕೆಲ ದಿನಗಳಿಂದ ನಡೆಯುತ್ತಿರುವ ಕಲ್ಲು ತೂರಾಟದ ವೇಳೆಯಲ್ಲಿ ಕೆಲವು ಭಯೋತ್ಪಾದಕರ ಬೆಂಬಲಿಗರು ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸದಸ್ಯ, ಉಗ್ರ ಬುರ್ಹಾನ್ ವಾನಿ ಮತ್ತು ಪಾಕಿಸ್ತಾನದ ಭಾವಚಿತ್ರವಿರುವ ಟೀ ಶರ್ಟ್ ಗಳನ್ನು ಧರಿಸಿ, ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕಿವೆ.

ಈ ಮೂಲಕ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ಬುರ್ಹಾನ್ ವಾನಿಯನ್ನು ಮಹಾನ್ ಹೋರಾಟಗಾರನೆಂಬಂತೆ ಬಿಂಬಿಸಿ, ಯುವಕರನ್ನು ಸೆಳೆಯಲು ಪಾಕ್ ಮೂಲಕ ಭಯೋತ್ಪಾದಕ ಸಂಘಟನೆಗಳು ಮತ್ತು ಪ್ರತ್ಯೇಕವಾದದ ಹೆಸರಲ್ಲಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಪ್ರತ್ಯೇಕವಾದಿಗಳು ಪ್ರಯತ್ನಿಸುತ್ತಿರುವ ಅಂಶ ಸಾಭೀತಾಗಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರಿದ ನಂತರ ಕಣಿವೆ ರಾಜ್ಯಗಳಲ್ಲಿ ಉಂಟಾಗುತ್ತಿರುವ ನಿರಂತರ ಗಲಭೆ, ಕಲ್ಲು ತೂರಾಟಗಳನ್ನು ನಿಯಂತ್ರಿಸಲು ನಿರಂತರವಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದರು. ಅಲ್ಲದೇ ನೋಟ್ಯಂತರ, ತೆರಿಗೆ ಇಲಾಖೆ ದಾಳಿಯಿಂದ ಪ್ರತ್ಯೇಕವಾದಿಗಳಿಗೆ ಹಣದ ಅಭಾವ ಉಂಟಾಗಿತ್ತು. ಕೇಂದ್ರದ ನಿರ್ಧಾರಗಳಿಂದ ವಿಚಲಿತವಾಗಿರುವ ಪ್ರತ್ಯೇಕವಾದಿಗಳು ಹಲವು ಅಡ್ಡ ಮಾರ್ಗಗಳನ್ನು ಹಿಡಿದು, ಹಿಂಸೆಗೆ ಪ್ರಚೋಧನೆ ನೀಡುತ್ತಿರುವುದು ಈ ಮೂಲಕ ಸಾಬೀತಾಗುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search