• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಯೋಧನ ತಾಯಿಗೆ ಪಿಂಚಣಿ ನೀಡಲಿಲ್ಲ ಕಾಂಗ್ರೆಸ್ ಸರ್ಕಾರ, ಆದರೆ ಹಾಗೆ ಮಾಡಲಿಲ್ಲ ಮೋದಿ ಸರ್ಕಾರ!

TNN Correspondent Posted On April 9, 2018
0


0
Shares
  • Share On Facebook
  • Tweet It

ದೆಹಲಿ: ಅದು 2009. ಈಶಾನ್ಯ ಭಾಗದ ಚೀನಾ ಗಡಿಗೆ ಹಿಮಾಚಲ ಪ್ರದೇಶದ ರಿಂಕು ರಾಮ್ ಎಂಬ ಯೋಧ ನಿಯೋಜನೆಗೊಂಡಿದ್ದ. ಆದರೆ ವೈರಿಗಳ ದಾಳಿಗೆ ಆತ ಹುತಾತ್ಮನಾದ. ಎಂತಹ ದುರದೃಷ್ಟ ನೋಡಿ, ಆತನ ದೇಹವೂ ಪತ್ತೆಯಾಗಲಿಲ್ಲ. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಯೋಧನ ಪತ್ತೆಹಚ್ಚಲು ಸಹ ಮುಂದಾಗಲಿಲ್ಲ.

ಯೋಧ ನಾಪತ್ತೆಯಾದ ಬಳಿಕ ಅವರ ತಾಯಿಗೆ ಪಿಂಚಣಿ ಸೌಲಭ್ಯ ಸೇರಿ ಹಲವು ಸೌಕರ್ಯ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಬಳಿಕ ಮರೆತು ಹೋಯಿತು. ಅತ್ತ ಮಗನನ್ನೂ ಕಳೆದುಕೊಂಡು, ಇತ್ತ ಆತನ ಪಿಂಚಣಿಯೂ ಬರದೆ ಕಷ್ಟದಲ್ಲೇ ಜೀವನ ಕಳೆಯತೊಡಗಿದ ಆ ತಾಯಿ ಪಿಂಚಣಿಗಾಗಿ ಸರ್ಕಾರಿ ಕಚೇರಿ ಅಲೆದರೂ ಪ್ರಯೋಜನವಾಗಲಿಲ್ಲ.

ಕೊನೆಗೂ ಇದರಿಂದ ಬೇಸತ್ತ ಆ ಯೋಧನ ತಾಯಿ ಸಶಸ್ತ್ರ ಪಡೆಗಳ ನ್ಯಾಯಾಧೀಕರಣದ ಮೆಟ್ಟಿಲೇರಬೇಕಾಯಿತು. ಕಾಂಗ್ರೆಸ್ಸಿನ ನಿರ್ಲಕ್ಷ್ಯ ಆ ತಾಯಿಯನ್ನು ಬಸವಳಿಯುವಂತೆ ಮಾಡಿತು. ಆದರೆ ಈ ವಿಷಯ ಯಾವಾಗ ಕೇಂದ್ರ ಸರ್ಕಾರಕ್ಕೆ ಗೊತ್ತಾಯಿತೋ, ಶೀಘ್ರ ಆ ತಾಯಿಗೆ ಸೌಲಭ್ಯ ನೀಡಲು ಮುಂದಾಯಿತು.

ಹೌದು, 2009ರಿಂದ ಅನ್ವಯವಾಗುವಂತೆ ಹುತಾತ್ಮ ಯೋಧನ ತಾಯಿಗೆ ಪಿಂಚಣಿ ಹಾಗೂ ಬರೋಬ್ಬರಿ 10 ಲಕ್ಷ ರೂ. ಗೌರವ ಧನ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಯಾವುದೇ ಒಂದು ಸರ್ಕಾರ ದೇಶದ ಜನರಿಗೆ ಸಕಲ ಸೌಲಭ್ಯ ಒದಗಿಸುವ ಜತೆಗೆ ಗಡಿ ಕಾಯುವ ಸೈನಿಕರಿಗೆ ಸಕಲ ಸೌಲಭ್ಯ ನೀಡಿದಾಗ ಮಾತ್ರ ಆ ದೇಶ ಸುಭದ್ರವಾಗಿರಲು ಸಾಧ್ಯ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರ ಇತ್ತೀಚೆಗೆ ಸೈನಿಕರ ವೇತನ ಹೆಚ್ಚಿಸಿದೆ. ನವವಿವಾಹಿತ ಯೋಧರಿಗೆ ಅತಿಥಿ ಗೃಹ ನಿರ್ಮಿಸಲು ಅನುಮತಿ ನೀಡಿದೆ. ಅಷ್ಟೇ ಏಕೆ, ಈಗ ಯೋಧನ ಕಳೆದುಕೊಂಡ ತಾಯಿಯ ಕಣ್ಣೀರನ್ನೂ ಒರೆಸಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search