• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಯೋಧನ ತಾಯಿಗೆ ಪಿಂಚಣಿ ನೀಡಲಿಲ್ಲ ಕಾಂಗ್ರೆಸ್ ಸರ್ಕಾರ, ಆದರೆ ಹಾಗೆ ಮಾಡಲಿಲ್ಲ ಮೋದಿ ಸರ್ಕಾರ!

TNN Correspondent Posted On April 9, 2018
0


0
Shares
  • Share On Facebook
  • Tweet It

ದೆಹಲಿ: ಅದು 2009. ಈಶಾನ್ಯ ಭಾಗದ ಚೀನಾ ಗಡಿಗೆ ಹಿಮಾಚಲ ಪ್ರದೇಶದ ರಿಂಕು ರಾಮ್ ಎಂಬ ಯೋಧ ನಿಯೋಜನೆಗೊಂಡಿದ್ದ. ಆದರೆ ವೈರಿಗಳ ದಾಳಿಗೆ ಆತ ಹುತಾತ್ಮನಾದ. ಎಂತಹ ದುರದೃಷ್ಟ ನೋಡಿ, ಆತನ ದೇಹವೂ ಪತ್ತೆಯಾಗಲಿಲ್ಲ. ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಯೋಧನ ಪತ್ತೆಹಚ್ಚಲು ಸಹ ಮುಂದಾಗಲಿಲ್ಲ.

ಯೋಧ ನಾಪತ್ತೆಯಾದ ಬಳಿಕ ಅವರ ತಾಯಿಗೆ ಪಿಂಚಣಿ ಸೌಲಭ್ಯ ಸೇರಿ ಹಲವು ಸೌಕರ್ಯ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಬಳಿಕ ಮರೆತು ಹೋಯಿತು. ಅತ್ತ ಮಗನನ್ನೂ ಕಳೆದುಕೊಂಡು, ಇತ್ತ ಆತನ ಪಿಂಚಣಿಯೂ ಬರದೆ ಕಷ್ಟದಲ್ಲೇ ಜೀವನ ಕಳೆಯತೊಡಗಿದ ಆ ತಾಯಿ ಪಿಂಚಣಿಗಾಗಿ ಸರ್ಕಾರಿ ಕಚೇರಿ ಅಲೆದರೂ ಪ್ರಯೋಜನವಾಗಲಿಲ್ಲ.

ಕೊನೆಗೂ ಇದರಿಂದ ಬೇಸತ್ತ ಆ ಯೋಧನ ತಾಯಿ ಸಶಸ್ತ್ರ ಪಡೆಗಳ ನ್ಯಾಯಾಧೀಕರಣದ ಮೆಟ್ಟಿಲೇರಬೇಕಾಯಿತು. ಕಾಂಗ್ರೆಸ್ಸಿನ ನಿರ್ಲಕ್ಷ್ಯ ಆ ತಾಯಿಯನ್ನು ಬಸವಳಿಯುವಂತೆ ಮಾಡಿತು. ಆದರೆ ಈ ವಿಷಯ ಯಾವಾಗ ಕೇಂದ್ರ ಸರ್ಕಾರಕ್ಕೆ ಗೊತ್ತಾಯಿತೋ, ಶೀಘ್ರ ಆ ತಾಯಿಗೆ ಸೌಲಭ್ಯ ನೀಡಲು ಮುಂದಾಯಿತು.

ಹೌದು, 2009ರಿಂದ ಅನ್ವಯವಾಗುವಂತೆ ಹುತಾತ್ಮ ಯೋಧನ ತಾಯಿಗೆ ಪಿಂಚಣಿ ಹಾಗೂ ಬರೋಬ್ಬರಿ 10 ಲಕ್ಷ ರೂ. ಗೌರವ ಧನ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಯಾವುದೇ ಒಂದು ಸರ್ಕಾರ ದೇಶದ ಜನರಿಗೆ ಸಕಲ ಸೌಲಭ್ಯ ಒದಗಿಸುವ ಜತೆಗೆ ಗಡಿ ಕಾಯುವ ಸೈನಿಕರಿಗೆ ಸಕಲ ಸೌಲಭ್ಯ ನೀಡಿದಾಗ ಮಾತ್ರ ಆ ದೇಶ ಸುಭದ್ರವಾಗಿರಲು ಸಾಧ್ಯ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರ ಇತ್ತೀಚೆಗೆ ಸೈನಿಕರ ವೇತನ ಹೆಚ್ಚಿಸಿದೆ. ನವವಿವಾಹಿತ ಯೋಧರಿಗೆ ಅತಿಥಿ ಗೃಹ ನಿರ್ಮಿಸಲು ಅನುಮತಿ ನೀಡಿದೆ. ಅಷ್ಟೇ ಏಕೆ, ಈಗ ಯೋಧನ ಕಳೆದುಕೊಂಡ ತಾಯಿಯ ಕಣ್ಣೀರನ್ನೂ ಒರೆಸಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search