• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಬಹುದಿನದ ಆಸೆ ಈಡೇರಿಸಿದ ಕೇಂದ್ರ ಸರ್ಕಾರ, ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಒಪ್ಪಿಗೆ

TNN Correspondent Posted On April 9, 2018


  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ 110 ಯುದ್ಧ ವಿಮಾನ ಖರೀದಿಗೆ ಅಂಗೀಕಾರ ನೀಡುವ ಮೂಲಕ ಸೇನೆ ಬಲಪಡಿಸಲು ಮುಂದಾಗುವ ಜತೆಗೆ, ಅದರಲ್ಲಿ ಶೇ.85ರಷ್ಟು ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆ ಮೂಲಕವೇ ತಯಾರಿಸಲು ಅನುಮತಿ ನೀಡಿ ಸ್ವದೇಶಿ ಉತ್ಪಾದನೆಗೆ ಅನುಕೂಲ ಮಾಡಿತು.

ಈಗ ಸೈನಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಅನುಮತಿ ನೀಡಿದ್ದು, ಆ ಮೂಲಕ ಕಳೆದ ಒಂಬತ್ತು ವರ್ಷದ ಹಿಂದೆ ಕೇಂದ್ರ ಸರ್ಕಾರಕ್ಕೆ ಬುಲೆಟ್ ಪ್ರೂಫ್ ಜಾಕೆಟ್ ನೀಡಬೇಕು ಎಂದು ಮನವಿ ಸಲ್ಲಿಸಿ ಕಾಯುತ್ತಿದ್ದ ಸೈನಿಕರ ಆಸೆ ತಣಿಸಿದೆ.

ಈಗ ಮೇಕ್ ಇನ್ ಇಂಡಿಯಾ ಮೂಲಕವೇ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲಿದ್ದು, ದೆಹಲಿ ಮೂಲದ ಎಸ್ಎಂಪಿಪಿ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 639 ಕೋಟಿ ರೂ. ವೆಚ್ಚದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಸೂಚಿಸಿದೆ.

ಮೂರು ವರ್ಷಗಳಲ್ಲಿ ಸೇನೆಗೆ ಬುಲೆಟ್ ಪ್ರೂಫ್ ಜಾಕೆಟ್ ವಿತರಿಸಲಾಗುವುದು ಎಂದು ಕಂಪನಿ ತಿಳಿಸಿದ್ದು, ಈ ಜಾಕೆಟ್ ಗಳು ಬೊರೊನ್ ಕಾರ್ಬೈಡ್ ಸೆರಾಮಿಕ್ ಎಂಬ ಅಂಶವನ್ನು ಹೊಂದಿದ್ದು, ಕಡಿಮೆ ಭಾರದ್ದಾಗಿರುತ್ತವೆ ಎಂದು ಕಂಪನಿ ಮಾಹಿತಿ ನೀಡಿದೆ. ಆದಾಗ್ಯೂ ಸೇನೆಗೆ 3.5 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್ ಅವಶ್ಯವಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search