• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಇಂದು ಚಾಲನೆ ನೀಡಲಿರುವ ರೈಲಿನಲ್ಲಿ ನಮ್ಮ ದೇಶದ ಆತ್ಮವಿಶ್ವಾಸವೂ ಓಡಲಿದೆ!

TNN Correspondent Posted On April 9, 2018
0


0
Shares
  • Share On Facebook
  • Tweet It

ಪಟನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ರಚನೆಯಾದ ಬಳಿಕ ಭಾರತೀಯ ರೈಲುಗಳು, ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದ್ದು, ಅದರ ಫಲವಾಗಿಯೇ ಇಂದು ದೇಶದ ವಿಮಾನ ನಿಲ್ದಾಣಗಳು ಆಧುನೀಕರಣಗೊಂಡಿದ್ದು ಪ್ರಯಾಣಿಕರಿಗೆ ಉತ್ಕೃಷ್ಟ ಸೌಲಭ್ಯ ಒದಗಿಸುತ್ತಿವೆ.

ಇದರ ಭಾಗವಾಗಿಯೇ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅತೀ ವೇಗದ ವಿದ್ಯುತ್ ಎಂಜಿನ್ ಹೊಂದಿರುವ ರೈಲಿಗೆ ಚಾಲನೆ ನೀಡಲಿದ್ದಾರೆ.

ಭಾರತೀಯ ರೈಲ್ವೆ ಕ್ಷೇತ್ರದಲ್ಲಿ ಈ ರೈಲು ಸಂಚಾರ ಹೊಸ ಮೈಲಿಗಲ್ಲು ಸ್ಥಾಪಿಸಲಾಗುತ್ತಿದೆ ಎಂದೇ ಹೇಳಲಾಗುತ್ತಿದ್ದು, ಇಷ್ಟು ಹಾರ್ಸ್ ಪವರ್ ಎಂಜಿನ್ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಭಾರತವೂ ಸೇರಲಿದೆ. ಆ ಮೂಲಕ ಈ ರೈಲಿನಲ್ಲಿ ನಮ್ಮ ಆತ್ಮವಿಶ್ವಾಸವೂ ಓಡಲಿದೆ.

ಈ ರೈಲು 12 ಸಾವಿರ ಹಾರ್ಸ್ ಪವರ್ (ಎಚ್ ಪಿ) ಇರುವ ಎಂಜಿನ್ ಹೊಂದಿದ್ದು, ಇಷ್ಟು ಹಾರ್ಸ್ ಪವರ್ ಇರುವ ರೈಲುಗಳನ್ನು ಹೊಂದಿರುವ ರಷ್ಯಾ, ಚೀನಾ ಹಾಗೂ ಸ್ವೀಡನ್ ರಾಷ್ಟ್ರಗಳ ನಂತರದ ಸ್ಥಾನವನ್ನು ಭಾರತವೇ ಹೊಂದಲಿದೆ. ಈ ರೈಲು ತಾಸಿಗೆ 110 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದುವರೆಗೂ ಭಾರತದಲ್ಲಿ 6 ಸಾವಿರ ಹಾರ್ಸ್ ಪವರ್ ಇರುವ ಎಂಜಿನ್ ಹೊಂದಿರುವ  ರೈಲುಗಳು ಮಾತ್ರ ಇದ್ದವು.

ಅಲ್ಲದೆ ಮಾಧೆಪುರದಲ್ಲಿ ಇಂತಹ ವಿದ್ಯುತ್ ಎಂಜಿನ್ ರೈಲುಗಳ ತಯಾರಿಕೆಗೆ ಸ್ಥಾಪಿಸುವ ಕಾರ್ಖಾನೆಗೂ ಮೋದಿ ಚಾಲನೆ ನೀಡಲಿದ್ದು, ಈ ಕಾರ್ಖಾನೆಯಲ್ಲಿ ಮುಂದಿನ 11 ವರ್ಷಗಳ ಅವಧಿಯಲ್ಲಿ 8 ಸಾವಿರ ಹಾರ್ಸ್ ಪವರ್ ಇರುವ ರೈಲುಗಳ ತಯಾರಿಸಲಾಗುತ್ತದೆ. 2021ರ ವೇಳೆಗೆ ಇಂತಹ 60 ರೈಲುಗಳು ದೇಶಾದ್ಯಂತ ಓಡಾಡಲಿವೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search