• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರರೊಂದಿಗೆ ಕೈಜೋಡಿಸಿದ ಮಗನನ್ನೇ ಕೊಂದು ಬಿಡಿ ಎಂದ ತಾಯಿ

TNN Correspondent Posted On April 10, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದ್ರೋಹಿಗಳು, ಭಯೋತ್ಪಾದಕರಿಗೆ ತಮ್ಮ ಕುಟುಂಬದಲ್ಲೇ ಸೂಕ್ತ ಬೆಲೆ, ನೆಲೆ ಇಲ್ಲ ಎಂಬುದನ್ನು ಅಸ್ಸಾಮನ ಕುಟುಂಬವೊಂದು ಸಾಬೀತು ಪಡಿಸಿದೆ. ಹೆತ್ತ ಮಗ ದೇಶದ್ರೋಹಿ ಕಾರ್ಯದಲ್ಲಿ ಭಾಗಿಯಾಗಿದ್ದಾನೆ ಎಂಬುದು ತಿಳಿದ ತಾಯಿಯೇ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಕೇಳಿಕೊಂಡಿದ್ದಾರೆ. ಅಸಾಮ್ ನಲ್ಲಿ ಕಳೆದ 2017 ರ ಜುಲೈನಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿರುವ ವರದಿ ಕೇಳಿರುವ ಪೋಷಕರು ಮತ್ತು ಆತನ ತಾಯಿ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಅಸ್ಸಾಂನ ಹೋಜೈ ಜಿಲ್ಲೆಯ ಜಮುನ್ಮುಖ ಗ್ರಾಮದ ಇಬ್ರಾಹ್ಮಿ ಜಮನ್ ಅವರ ಮಗ ಖಮರ್ ಉಜ್ಮಾನ್ ಭಯೋತ್ಪಾದಕ ಸಂಘಟನೆ ಸೇರಿದ ವ್ಯಕ್ತಿ. ಈತ ಕಳೆದ 2017ರ ಜುಲೈನಿಂದ ಕಾಣೆಯಾಗಿದ್ದ, ಇತ್ತೀಚೆಗೆ ಈತ ಗನ್ ಹೊಂದಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಚಿತ್ರಕ್ಕೆ ಆತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದಾನೆ ಮತ್ತು ಆತನ ಗುಪ್ತ ಹೆಸರು ಡಾ.ಹುರೈರಾಃ ಎಂಬ ಅಡಿ ಬರಹ ನೀಡಲಾಗಿತ್ತು.

ಮಗನ ಚಿತ್ರವನ್ನು ನೋಡಿ ತಾಯಿ ಗುರುತು ಹಿಡಿದ್ದಿದ್ದು, ಈತನೇ ನನ್ನ ಮಗ. ಮೊದಲಿಗಿಂತಲು ಸ್ವಲ್ಪ ಸಣ್ಣಾಗಿದ್ದಾನೆ. ನಮ್ಮ ಮಗ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದೇ ಆದರೆ ಆತನಿಗೆ ಗುಂಡಿಕಿ ಕೊಂದು ಬಿಡಬೇಕು. ದೇಶದ್ರೋಹಿಯನ್ನು ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ಆಗುವುದಿಲ್ಲ ಎಂದು ಆತನ ತಾಯಿ ತೆಹೆರಾ ಬೇಗಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಮರ್ ಉಜ್ಮಾನ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಾಶ್ಮೀರದ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗಿದೆ. ಆತನನ್ನು ಮರಳಿ ಮನೆಗೆ ಕರೆದುಕೊಂಡು ಬರುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಅಸ್ಸಾಂ ಡಿಜಿಪಿ ಮುಖೇಶ್ ಸಹಾಯ್ ತಿಳಿಸಿದ್ದಾರೆ.

ಜಮಾನ್ ಪದವಿ ವಿದ್ಯಾರ್ಥಿಯಾಗಿದ್ದು, ಚಾಣಾಕ್ಷ ವಿದ್ಯಾರ್ಥಿಯಾಗಿದ್ದ. ಕಳೆದ ವರ್ಷ ಜಮ್ಮು ಕಾಶ್ಮೀರಕ್ಕೆ ಕುಟುಂಬ ಪ್ರವಾಸ ಹೋದಾಗ  ಆತ ಕಳೆದು ಹೋಗಿದ್ದ. ಆದರೆ ಆತ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದು ತಿಳಿದಿರಲಿಲ್ಲ ಎಂದು ಸಹೋದರ ಮಫೀದುಲ್ ಹೇಳುತ್ತಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search