• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರೊಂದಿಗೆ ಕೈಜೋಡಿಸಿದ ಮಗನನ್ನೇ ಕೊಂದು ಬಿಡಿ ಎಂದ ತಾಯಿ

TNN Correspondent Posted On April 10, 2018


  • Share On Facebook
  • Tweet It

ಗುವಾಹಟಿ: ದೇಶದ್ರೋಹಿಗಳು, ಭಯೋತ್ಪಾದಕರಿಗೆ ತಮ್ಮ ಕುಟುಂಬದಲ್ಲೇ ಸೂಕ್ತ ಬೆಲೆ, ನೆಲೆ ಇಲ್ಲ ಎಂಬುದನ್ನು ಅಸ್ಸಾಮನ ಕುಟುಂಬವೊಂದು ಸಾಬೀತು ಪಡಿಸಿದೆ. ಹೆತ್ತ ಮಗ ದೇಶದ್ರೋಹಿ ಕಾರ್ಯದಲ್ಲಿ ಭಾಗಿಯಾಗಿದ್ದಾನೆ ಎಂಬುದು ತಿಳಿದ ತಾಯಿಯೇ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಕೇಳಿಕೊಂಡಿದ್ದಾರೆ. ಅಸಾಮ್ ನಲ್ಲಿ ಕಳೆದ 2017 ರ ಜುಲೈನಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿರುವ ವರದಿ ಕೇಳಿರುವ ಪೋಷಕರು ಮತ್ತು ಆತನ ತಾಯಿ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಅಸ್ಸಾಂನ ಹೋಜೈ ಜಿಲ್ಲೆಯ ಜಮುನ್ಮುಖ ಗ್ರಾಮದ ಇಬ್ರಾಹ್ಮಿ ಜಮನ್ ಅವರ ಮಗ ಖಮರ್ ಉಜ್ಮಾನ್ ಭಯೋತ್ಪಾದಕ ಸಂಘಟನೆ ಸೇರಿದ ವ್ಯಕ್ತಿ. ಈತ ಕಳೆದ 2017ರ ಜುಲೈನಿಂದ ಕಾಣೆಯಾಗಿದ್ದ, ಇತ್ತೀಚೆಗೆ ಈತ ಗನ್ ಹೊಂದಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಚಿತ್ರಕ್ಕೆ ಆತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದಾನೆ ಮತ್ತು ಆತನ ಗುಪ್ತ ಹೆಸರು ಡಾ.ಹುರೈರಾಃ ಎಂಬ ಅಡಿ ಬರಹ ನೀಡಲಾಗಿತ್ತು.

ಮಗನ ಚಿತ್ರವನ್ನು ನೋಡಿ ತಾಯಿ ಗುರುತು ಹಿಡಿದ್ದಿದ್ದು, ಈತನೇ ನನ್ನ ಮಗ. ಮೊದಲಿಗಿಂತಲು ಸ್ವಲ್ಪ ಸಣ್ಣಾಗಿದ್ದಾನೆ. ನಮ್ಮ ಮಗ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದೇ ಆದರೆ ಆತನಿಗೆ ಗುಂಡಿಕಿ ಕೊಂದು ಬಿಡಬೇಕು. ದೇಶದ್ರೋಹಿಯನ್ನು ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ಆಗುವುದಿಲ್ಲ ಎಂದು ಆತನ ತಾಯಿ ತೆಹೆರಾ ಬೇಗಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಮರ್ ಉಜ್ಮಾನ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಾಶ್ಮೀರದ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗಿದೆ. ಆತನನ್ನು ಮರಳಿ ಮನೆಗೆ ಕರೆದುಕೊಂಡು ಬರುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಅಸ್ಸಾಂ ಡಿಜಿಪಿ ಮುಖೇಶ್ ಸಹಾಯ್ ತಿಳಿಸಿದ್ದಾರೆ.

ಜಮಾನ್ ಪದವಿ ವಿದ್ಯಾರ್ಥಿಯಾಗಿದ್ದು, ಚಾಣಾಕ್ಷ ವಿದ್ಯಾರ್ಥಿಯಾಗಿದ್ದ. ಕಳೆದ ವರ್ಷ ಜಮ್ಮು ಕಾಶ್ಮೀರಕ್ಕೆ ಕುಟುಂಬ ಪ್ರವಾಸ ಹೋದಾಗ  ಆತ ಕಳೆದು ಹೋಗಿದ್ದ. ಆದರೆ ಆತ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದು ತಿಳಿದಿರಲಿಲ್ಲ ಎಂದು ಸಹೋದರ ಮಫೀದುಲ್ ಹೇಳುತ್ತಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search