• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರೊಂದಿಗೆ ಕೈಜೋಡಿಸಿದ ಮಗನನ್ನೇ ಕೊಂದು ಬಿಡಿ ಎಂದ ತಾಯಿ

TNN Correspondent Posted On April 10, 2018


  • Share On Facebook
  • Tweet It

ಗುವಾಹಟಿ: ದೇಶದ್ರೋಹಿಗಳು, ಭಯೋತ್ಪಾದಕರಿಗೆ ತಮ್ಮ ಕುಟುಂಬದಲ್ಲೇ ಸೂಕ್ತ ಬೆಲೆ, ನೆಲೆ ಇಲ್ಲ ಎಂಬುದನ್ನು ಅಸ್ಸಾಮನ ಕುಟುಂಬವೊಂದು ಸಾಬೀತು ಪಡಿಸಿದೆ. ಹೆತ್ತ ಮಗ ದೇಶದ್ರೋಹಿ ಕಾರ್ಯದಲ್ಲಿ ಭಾಗಿಯಾಗಿದ್ದಾನೆ ಎಂಬುದು ತಿಳಿದ ತಾಯಿಯೇ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಕೇಳಿಕೊಂಡಿದ್ದಾರೆ. ಅಸಾಮ್ ನಲ್ಲಿ ಕಳೆದ 2017 ರ ಜುಲೈನಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿರುವ ವರದಿ ಕೇಳಿರುವ ಪೋಷಕರು ಮತ್ತು ಆತನ ತಾಯಿ ಆತನನ್ನು ಗುಂಡಿಕ್ಕಿ ಕೊಂದು ಬಿಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಅಸ್ಸಾಂನ ಹೋಜೈ ಜಿಲ್ಲೆಯ ಜಮುನ್ಮುಖ ಗ್ರಾಮದ ಇಬ್ರಾಹ್ಮಿ ಜಮನ್ ಅವರ ಮಗ ಖಮರ್ ಉಜ್ಮಾನ್ ಭಯೋತ್ಪಾದಕ ಸಂಘಟನೆ ಸೇರಿದ ವ್ಯಕ್ತಿ. ಈತ ಕಳೆದ 2017ರ ಜುಲೈನಿಂದ ಕಾಣೆಯಾಗಿದ್ದ, ಇತ್ತೀಚೆಗೆ ಈತ ಗನ್ ಹೊಂದಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅಲ್ಲದೇ ಚಿತ್ರಕ್ಕೆ ಆತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದಾನೆ ಮತ್ತು ಆತನ ಗುಪ್ತ ಹೆಸರು ಡಾ.ಹುರೈರಾಃ ಎಂಬ ಅಡಿ ಬರಹ ನೀಡಲಾಗಿತ್ತು.

ಮಗನ ಚಿತ್ರವನ್ನು ನೋಡಿ ತಾಯಿ ಗುರುತು ಹಿಡಿದ್ದಿದ್ದು, ಈತನೇ ನನ್ನ ಮಗ. ಮೊದಲಿಗಿಂತಲು ಸ್ವಲ್ಪ ಸಣ್ಣಾಗಿದ್ದಾನೆ. ನಮ್ಮ ಮಗ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದೇ ಆದರೆ ಆತನಿಗೆ ಗುಂಡಿಕಿ ಕೊಂದು ಬಿಡಬೇಕು. ದೇಶದ್ರೋಹಿಯನ್ನು ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ಆಗುವುದಿಲ್ಲ ಎಂದು ಆತನ ತಾಯಿ ತೆಹೆರಾ ಬೇಗಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಮರ್ ಉಜ್ಮಾನ್ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಾಶ್ಮೀರದ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗಿದೆ. ಆತನನ್ನು ಮರಳಿ ಮನೆಗೆ ಕರೆದುಕೊಂಡು ಬರುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಅಸ್ಸಾಂ ಡಿಜಿಪಿ ಮುಖೇಶ್ ಸಹಾಯ್ ತಿಳಿಸಿದ್ದಾರೆ.

ಜಮಾನ್ ಪದವಿ ವಿದ್ಯಾರ್ಥಿಯಾಗಿದ್ದು, ಚಾಣಾಕ್ಷ ವಿದ್ಯಾರ್ಥಿಯಾಗಿದ್ದ. ಕಳೆದ ವರ್ಷ ಜಮ್ಮು ಕಾಶ್ಮೀರಕ್ಕೆ ಕುಟುಂಬ ಪ್ರವಾಸ ಹೋದಾಗ  ಆತ ಕಳೆದು ಹೋಗಿದ್ದ. ಆದರೆ ಆತ ಭಯೋತ್ಪಾದಕರೊಂದಿಗೆ ಕೈಜೋಡಿಸಿದ್ದು ತಿಳಿದಿರಲಿಲ್ಲ ಎಂದು ಸಹೋದರ ಮಫೀದುಲ್ ಹೇಳುತ್ತಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search