• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018
0


0
Shares
  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search