• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018
0


0
Shares
  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search