• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದಲ್ಲವೇ ಬದಲಾವಣೆ: ಘೋರಖಪುರದ ಮದರಸಾದಲ್ಲಿ ಸಂಸ್ಕೃತ ಪಾಠ ಬೋಧನೆ

TNN Correspondent Posted On April 10, 2018


  • Share On Facebook
  • Tweet It

ಘೋರಖಪುರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದ ಹಲವು ಮಹತ್ತರ ಬದಲಾವಣೆಗಳಾಗುತ್ತಿವೆ. ಕೋಮುಗಲಭೆ, ಕೊಲೆ, ಸುಲಿಗೆಗಳಿಂದ ನಿತ್ಯ ಉತ್ತರ ಪ್ರದೇಶ ತತ್ತರಿಸಿ ಹೋಗಿತ್ತು. ಕೋಮು ಸೌಹಾರ್ದತೆಯಂತೂ ಹದಗಟ್ಟಿತ್ತು. ಆದರೆ ಇದೀಗ ಯೋಗಿ ಎಲ್ಲ ಸಮುದಾಯದವರಿಗೆ ನೀಡುತ್ತಿರುವ ಅಭಯದಿಂದ ಹೊಸ ಬದಲಾವಣೆಗಳಾಗುತ್ತಿದ್ದು, ಘೋರಖಪುರದಲ್ಲಿ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಪಾಠ ಬೋಧಿಸುವ ಮದರಸಾದಲ್ಲಿ ಸಂಸ್ಕೃತವನ್ನು ಬೋಧಿಸಲು ಆರಂಭಿಸಲಾಗಿದೆ.

ಘೋರಖಪುರದ ಮದರಸಾವೊಂದರಲ್ಲಿ ಮಕ್ಕಳಿಗೆ ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತಿವನ್ನು ಬೋಧಿಸಲಾಗುತ್ತಿದೆ. ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದಲ್ಲಿ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಹೊಸ ಕಲಿಕೆಯನ್ನು ಮಕ್ಕಳು ಖುಷಿಯಿಂದ ಆಹ್ವಾನಿಸಿದ್ದಾರೆ.

‘ಸಂಸ್ಕೃತ ಕಲಿಯುವುದು ನಮಗೆ ಬಹಳ ಸಂತಸ ಮೂಡಿಸಿದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ’ ಎನ್ನುತ್ತಾರೆ ಇಲ್ಲಿನ ಮಕ್ಕಳು.

‘ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ” ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ತಿಳಿಸಿದ್ದಾರೆ.

ಸಂಸ್ಕೃತಿ ಬೋಧನೆಯಿಂದ ಕೋಮುಭಾವನೆ ತೊಡೆದು ಹಾಕಿ, ಸೌಹಾರ್ದದ ವಾತಾವರಣ ನಿರ್ಮಿಸಬಹುದು ಎಂಬುದು ಮದರಸಾದ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search