• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ಲಕ್ಷ ಯುವಕರಿಗೆ ಉದ್ಯೋಗ ನೀಡಲು ಮುಂದಾದ ಆ ಬಿಜೆಪಿ ಸರ್ಕಾರ ಯಾವುದು ಗೊತ್ತೇ?

TNN Correspondent Posted On April 10, 2018
0


0
Shares
  • Share On Facebook
  • Tweet It

ರಾಂಚಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯುವಕರ ಕೌಶಲ ಅಭಿವೃದ್ಧಿಗೊಳಿಸಿ ಉದ್ಯೋಗ ನೀಡುತ್ತಿದ್ದರೂ, ಕೆಲವು ವಿರೋಧಿಗಳು ಮಾತ್ರ ಮೋದಿ ಅವಧಿಯಲ್ಲಿ ಉದ್ಯೋಗವೇ ಸೃಷ್ಟಿಯಾಗಿಲ್ಲ ಎಂದು ಬೊಬ್ಬೆ ಹೊಡೆಯುತ್ತಾರೆ. ಆದರೂ ಮೋದಿ ಅವರು ಇದಾವುದಕ್ಕೂ ಲೆಕ್ಕಿಸಿದೆ ದೇಶದ ಜನರಿಗೆ ಉದ್ಯೋಗ ಹಾಗೂ ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ ನೂತನ ಉದ್ಯೋಗ ಸೃಷ್ಟಿಸುತ್ತಿದ್ದಾರೆ.

ಇದೇ ಮಾದರಿಯಲ್ಲಿ ಜಾರ್ಖಂಡ್ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ಮುಂದಾಗಿದ್ದು, ಬರೋಬ್ಬರಿ ಒಂದು ಲಕ್ಷ  ಯುವಕರಿಗೆ ಕೌಶಲ ತರಬೇತಿ ನೀಡುವ ಜತೆಗೆ ಉದ್ಯೋಗ ಸಹ ಒದಗಿಸುವ ಯೋಜನೆ ರೂಪಿಸಿದೆ.

ಈ ಕುರಿತು ಮುಖ್ಯಮಂತ್ರಿ ರಘುಬರ್ ದಾಸ್ ಮಾಹಿತಿ ನೀಡಿದ್ದು, ನಮಗೆ ಮಾನವ ಸಂಪನ್ಮೂಲವೇ ಬೃಹತ್ ಶಕ್ತಿಯಾಗಿದ್ದು, ಅವರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ ನಡೆಸಿದ್ದು, ರಾಜ್ಯದ ಆರು ಅತೀ ಹಿಂದುಳಿದ ಜಿಲ್ಲೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೌಶಲಾಭಿವೃದ್ಧಿ ಕೇಂದ್ರ ತೆರೆದು ಯುವಕರಿಗೆ ತರಬೇತಿ ನೀಡುವಂತೆ ಈಗಾಗಲೇ ಜಾರ್ಖಂಡ್ ಕೌಶಲಾಭಿವೃದ್ಧಿ ಮಿಶನ್ ಸೊಸೈಟಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಲಿದ್ದಾರೆ ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಆಡಳಿತದಲ್ಲಿ ಉದ್ಯೋಗವೇ ಸೃಷ್ಟಿಯಾಗುತ್ತಿಲ್ಲ ಎಂದು ಬೊಬ್ಬೆ ಹಾಕುವವರ ಬಾಯಿಯನ್ನು ಜಾರ್ಖಂಡ್ ಬಿಜೆಪಿ ಸರ್ಕಾರ ಮುಚ್ಚಿಸಿದ್ದು, ಒಂದು ಲಕ್ಷ ಜನರಿಗೆ ಉದ್ಯೋಗ ನೀಡುತ್ತಿರುವುದು ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search