• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದ ಗಾಣಿಗ ಸಂಘ, “ಪ್ರತ್ಯೇಕತಾವಾದಿ”ಗಳಿಗಿದು ಹಿನ್ನಡೆ!

TNN Correspondent Posted On April 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತದೆ ಎಂಬುದು ಗೊತ್ತಾಯಿತೋ, ಅಲ್ಲಿಂದ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ನೀಡಬೇಕು ಎಂಬ ಕೂಗು ಜೋರಾಯಿತು. ಕೆಲವು “ಪ್ರತ್ಯೇಕತಾವಾದಿ” ಮನಸ್ಸುಗಳು ಒಂದಾಗಿ ಈ ಕೂಗನ್ನು ಮತ್ತಷ್ಟು ಜೋರು ಮಾಡಿದವು. ತಾನಿರುವುದೇ ಒಡೆದು ಆಳುವುದಕ್ಕೆ ಎಂದು ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಧರ್ಮದ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು.

ಆದರೆ ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಿದ್ದರಾಮಯ್ಯನವರನ್ನು ಒಡೆದು ಆಳುವ ಮುಖ್ಯಮಂತ್ರಿ ಎಂದೇ ಸಂಬೋಧಿಸಲಾಗುತ್ತಿದೆ. ಆದಾಗ್ಯೂ ವೀರಶೈವ ಮಹಾಸಭಾ, ಡಾ.ಶಿವಕುಮಾರ ಸ್ವಾಮೀಜಿ ಅವರು ಪ್ರತ್ಯೇಕ ಧರ್ಮ ಸ್ಥಾಪನೆಗೆ ವಿರೋಧಿಸಿದ್ದಾರೆ. ಆ ಮೂಲಕ ಪ್ರತ್ಯೇಕತಾವಾದಿಗಳಿಗೆ ತಿರುಗೇಟು ನೀಡಿದ್ದಾರೆ.

ಈಗ ಪ್ರತ್ಯೇಕ ಧರ್ಮದ ಕೂಗು ಎಬ್ಬಿಸಿದವರಿಗೆ ಈಗ ಮತ್ತೊಂದು ಹಿನ್ನಡೆಯಾಗಿದ್ದು, ನಾವು ಯಾವುದೇ ಕಾರಣಕ್ಕು ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಸೇರುವುದಿಲ್ಲ ಎಂದು ಕರ್ನಾಟಕ ರಾಜ್ಯ ಯುವ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಘೊಷಿಸಿದೆ.

ಈ ಕುರಿತು ಮಾಹಿತಿ ಆಯೋಗದ ಮಾಜಿ ಆಯುಕ್ತರೂ ಆದ ಸಂಘದ ಮುಖಂಡ ಡಾ.ಶೇಖರ್ ಸಜ್ಜನ್ ಮಾತನಾಡಿದ್ದು, ನಾವು ಪ್ರತ್ಯೇಕ ಧರ್ಮದ ಪರ ಎಂದಿಗೂ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಯಾವುದೇ ಪ್ರತ್ಯೇಕ ಧರ್ಮಕ್ಕೂ ನಾವು ಸೇರಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹವನೂರ್ ಸಮಿತಿ ಶಿಫಾರಸಿನ ಪ್ರಕಾರ ಗಾಣಿಗ ಸಮುದಾಯ 2 ಎ ವರ್ಗಕ್ಕೆ ಬರುತ್ತದೆ ಎಂದು ಗುರುತಿಸಲಾಗಿದೆ. ಈಗಾಗಲೇ ನಾವು ಸರ್ಕಾರದಿಂದ ಮೀಸಲು ಸೌಲಭ್ಯ ಪಡೆಯುತ್ತಿದ್ದೇವೆ. ಹೀಗಿರುವಾಗ ಪ್ರತ್ಯೇಕ ಧರ್ಮದ ಜತೆ ಹೋಗಿ ಇರುವ ಸೌಲಭ್ಯ ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಗಾಣಿಗ ಸಮುದಾಯದವರನ್ನೂ ಲಿಂಗಾಯತ ಪ್ರತ್ಯೇಕ ಧರ್ಮದೊಳಗೆ ಸೇರಿಸಲು ಪ್ರತ್ಯೇಕತಾವಾದಿಗಳು ಇಚ್ಛಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದವು. ಈಗ ಗಾಣಿಗ ಸಮುದಾಯದ ಮುಖಂಡರೇ ನಾವು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದಿರುವುದು ಪ್ರತ್ಯೇಕತಾವಾದಿಗಳಿಗೆ ಹಿನ್ನಡೆಯಾದಂತಾಗಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search