• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದ ಗಾಣಿಗ ಸಂಘ, “ಪ್ರತ್ಯೇಕತಾವಾದಿ”ಗಳಿಗಿದು ಹಿನ್ನಡೆ!

TNN Correspondent Posted On April 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತದೆ ಎಂಬುದು ಗೊತ್ತಾಯಿತೋ, ಅಲ್ಲಿಂದ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ನೀಡಬೇಕು ಎಂಬ ಕೂಗು ಜೋರಾಯಿತು. ಕೆಲವು “ಪ್ರತ್ಯೇಕತಾವಾದಿ” ಮನಸ್ಸುಗಳು ಒಂದಾಗಿ ಈ ಕೂಗನ್ನು ಮತ್ತಷ್ಟು ಜೋರು ಮಾಡಿದವು. ತಾನಿರುವುದೇ ಒಡೆದು ಆಳುವುದಕ್ಕೆ ಎಂದು ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಧರ್ಮದ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು.

ಆದರೆ ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಿದ್ದರಾಮಯ್ಯನವರನ್ನು ಒಡೆದು ಆಳುವ ಮುಖ್ಯಮಂತ್ರಿ ಎಂದೇ ಸಂಬೋಧಿಸಲಾಗುತ್ತಿದೆ. ಆದಾಗ್ಯೂ ವೀರಶೈವ ಮಹಾಸಭಾ, ಡಾ.ಶಿವಕುಮಾರ ಸ್ವಾಮೀಜಿ ಅವರು ಪ್ರತ್ಯೇಕ ಧರ್ಮ ಸ್ಥಾಪನೆಗೆ ವಿರೋಧಿಸಿದ್ದಾರೆ. ಆ ಮೂಲಕ ಪ್ರತ್ಯೇಕತಾವಾದಿಗಳಿಗೆ ತಿರುಗೇಟು ನೀಡಿದ್ದಾರೆ.

ಈಗ ಪ್ರತ್ಯೇಕ ಧರ್ಮದ ಕೂಗು ಎಬ್ಬಿಸಿದವರಿಗೆ ಈಗ ಮತ್ತೊಂದು ಹಿನ್ನಡೆಯಾಗಿದ್ದು, ನಾವು ಯಾವುದೇ ಕಾರಣಕ್ಕು ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಸೇರುವುದಿಲ್ಲ ಎಂದು ಕರ್ನಾಟಕ ರಾಜ್ಯ ಯುವ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಘೊಷಿಸಿದೆ.

ಈ ಕುರಿತು ಮಾಹಿತಿ ಆಯೋಗದ ಮಾಜಿ ಆಯುಕ್ತರೂ ಆದ ಸಂಘದ ಮುಖಂಡ ಡಾ.ಶೇಖರ್ ಸಜ್ಜನ್ ಮಾತನಾಡಿದ್ದು, ನಾವು ಪ್ರತ್ಯೇಕ ಧರ್ಮದ ಪರ ಎಂದಿಗೂ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಯಾವುದೇ ಪ್ರತ್ಯೇಕ ಧರ್ಮಕ್ಕೂ ನಾವು ಸೇರಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹವನೂರ್ ಸಮಿತಿ ಶಿಫಾರಸಿನ ಪ್ರಕಾರ ಗಾಣಿಗ ಸಮುದಾಯ 2 ಎ ವರ್ಗಕ್ಕೆ ಬರುತ್ತದೆ ಎಂದು ಗುರುತಿಸಲಾಗಿದೆ. ಈಗಾಗಲೇ ನಾವು ಸರ್ಕಾರದಿಂದ ಮೀಸಲು ಸೌಲಭ್ಯ ಪಡೆಯುತ್ತಿದ್ದೇವೆ. ಹೀಗಿರುವಾಗ ಪ್ರತ್ಯೇಕ ಧರ್ಮದ ಜತೆ ಹೋಗಿ ಇರುವ ಸೌಲಭ್ಯ ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಗಾಣಿಗ ಸಮುದಾಯದವರನ್ನೂ ಲಿಂಗಾಯತ ಪ್ರತ್ಯೇಕ ಧರ್ಮದೊಳಗೆ ಸೇರಿಸಲು ಪ್ರತ್ಯೇಕತಾವಾದಿಗಳು ಇಚ್ಛಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದವು. ಈಗ ಗಾಣಿಗ ಸಮುದಾಯದ ಮುಖಂಡರೇ ನಾವು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದಿರುವುದು ಪ್ರತ್ಯೇಕತಾವಾದಿಗಳಿಗೆ ಹಿನ್ನಡೆಯಾದಂತಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search