• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರ ಹಿತ ಕಾಪಾಡಲು ಮಹಾರಾಷ್ಟ್ರ ಸರ್ಕಾರ ಯಾವ ಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ ಗೊತ್ತಾ?

TNN Correspondent Posted On April 10, 2018
0


0
Shares
  • Share On Facebook
  • Tweet It

ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ರೈತರು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದಾಗ, ಬಿಜೆಪಿ ವಿರೋಧಿಗಳೆಲ್ಲ ಮೋದಿ ಅವರನ್ನೇ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ರಾಜ್ಯ ಸರ್ಕಾರದ ವಿರುದ್ಧವೂ ಮಾತನಾಡಿದರು.

ಆದರೆ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಆರು ತಿಂಗಳ ಒಳಗೆ ರೈತರ ಎಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡುವ ಮೂಲಕ ತಮ್ಮದು ರೈತಪರ ಸರ್ಕಾರ ಎಂಬುದನ್ನು ಘೋಷಿಸಿದ್ದರು. ಆದರೆ ಇದೇ ದೆಹಲಿಯಲ್ಲಿ ಭೂ ಸ್ವಾಧೀನ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು ಎಂದು ಅವರ ಗುಡಿಸಲುಗಳನ್ನೇ ಸುಟ್ಟು ಹಾಕಿದರೂ ಯಾರೂ ದೆಹಲಿ ಸರ್ಕಾರದ ವಿರುದ್ಧ ಸೊಲ್ಲೆತ್ತಲ್ಲಿಲ್ಲ.

ಈ ಮೋದಿ ವಿರೋಧಿಗಳ ಇಬ್ಬಂದಿತನ ಒತ್ತಟ್ಟಿಗಿರಲಿ. ಈಗ ಮಹಾರಾಷ್ಟ್ರ ಸರ್ಕಾರ ರೈತರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಮುಂದಾಗಿದ್ದು, ಕೃಷಿ ಅಭಿವೃದ್ಧಿಗಾಗಿ 2,726 ಕೋಟಿ ರೂ. ವಿನಿಯೋಗಿಸಲು ವಿಶ್ವಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ.

ತೀವ್ರ ಬರದಿಂದ ಕಂಗೆಟ್ಟಿರುವ ಹಾಗೂ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಮಹಾರಾಷ್ಟ್ರದ ಮರಾಠವಾಡ ಹಾಗೂ ವಿದರ್ಭ ಪ್ರದೇಶಗಳ ಕೃಷಿ ಸಮಸ್ಯೆ ಬಗೆಹರಿಸಲು ಇಷ್ಟೂ ಹಣವನ್ನು ವಿನಿಯೋಗಿಸಲಿದ್ದು, ಈ ಭಾಗದ ರೈತರಿಗೆ ಯೋಜನೆ ವರದಾನವಾಗಲಿದೆ.

ಇದಕ್ಕೆ ಮಹಾರಾಷ್ಟ್ರ ಕೃಷಿ ಹವಾಮಾನ ಚೇತರಿಕೆ ಯೋಜನೆ ಎಂದು ಹೆಸರಿಟ್ಟಿದ್ದು, ವಿಶ್ವಸಂಸ್ಥೆ ಈ ಯೋಜನೆಗೆ ನೆರವು ನೀಡಲಿದೆ. ಮಹಾರಾಷ್ಟ್ರದ ಈ ಎರಡೂ ಭಾಗದಲ್ಲಿ ಕೃಷಿಗೆ ನೀರಾವರಿ, ವೈಜ್ಞಾನಿಕ ವಿಧಾನ ಅಳವಡಿಕೆ ಸೇರಿ ಹಲವು ಅಭಿವೃದ್ಧಿಗಾಗಿ ಹಣ ವಿನಿಯೋಗಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರವೊಂದು ತನ್ನ ರಾಜ್ಯದ ಜನರ ಒಳಿತಿಗಾಗಿ ವಿಶ್ವಸಂಸ್ಥೆಯೊಂದಿಗೆ ಮಹತ್ತರ ಒಪ್ಪಂದ ಮಾಡಿಕೊಂಡು ಸಾವಿರಾರು ಕೋಟಿ ರೂ. ವ್ಯಯಿಸುತ್ತಿರುವುದು ರೈತರ ಹಿತದೃಷ್ಟಿಯಿಂದ ಶ್ಲಾಘನೀಯವಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂತಹ ಯೋಜನೆ ಜಾರಿಯಾಗಿ ರೈತರ ಕಷ್ಟ ನೀಗಲಿ ಎಂಬುದೇ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search