• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರ ಹಿತ ಕಾಪಾಡಲು ಮಹಾರಾಷ್ಟ್ರ ಸರ್ಕಾರ ಯಾವ ಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ ಗೊತ್ತಾ?

TNN Correspondent Posted On April 10, 2018
0


0
Shares
  • Share On Facebook
  • Tweet It

ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ರೈತರು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದಾಗ, ಬಿಜೆಪಿ ವಿರೋಧಿಗಳೆಲ್ಲ ಮೋದಿ ಅವರನ್ನೇ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ರಾಜ್ಯ ಸರ್ಕಾರದ ವಿರುದ್ಧವೂ ಮಾತನಾಡಿದರು.

ಆದರೆ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಆರು ತಿಂಗಳ ಒಳಗೆ ರೈತರ ಎಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡುವ ಮೂಲಕ ತಮ್ಮದು ರೈತಪರ ಸರ್ಕಾರ ಎಂಬುದನ್ನು ಘೋಷಿಸಿದ್ದರು. ಆದರೆ ಇದೇ ದೆಹಲಿಯಲ್ಲಿ ಭೂ ಸ್ವಾಧೀನ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು ಎಂದು ಅವರ ಗುಡಿಸಲುಗಳನ್ನೇ ಸುಟ್ಟು ಹಾಕಿದರೂ ಯಾರೂ ದೆಹಲಿ ಸರ್ಕಾರದ ವಿರುದ್ಧ ಸೊಲ್ಲೆತ್ತಲ್ಲಿಲ್ಲ.

ಈ ಮೋದಿ ವಿರೋಧಿಗಳ ಇಬ್ಬಂದಿತನ ಒತ್ತಟ್ಟಿಗಿರಲಿ. ಈಗ ಮಹಾರಾಷ್ಟ್ರ ಸರ್ಕಾರ ರೈತರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಮುಂದಾಗಿದ್ದು, ಕೃಷಿ ಅಭಿವೃದ್ಧಿಗಾಗಿ 2,726 ಕೋಟಿ ರೂ. ವಿನಿಯೋಗಿಸಲು ವಿಶ್ವಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ.

ತೀವ್ರ ಬರದಿಂದ ಕಂಗೆಟ್ಟಿರುವ ಹಾಗೂ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಮಹಾರಾಷ್ಟ್ರದ ಮರಾಠವಾಡ ಹಾಗೂ ವಿದರ್ಭ ಪ್ರದೇಶಗಳ ಕೃಷಿ ಸಮಸ್ಯೆ ಬಗೆಹರಿಸಲು ಇಷ್ಟೂ ಹಣವನ್ನು ವಿನಿಯೋಗಿಸಲಿದ್ದು, ಈ ಭಾಗದ ರೈತರಿಗೆ ಯೋಜನೆ ವರದಾನವಾಗಲಿದೆ.

ಇದಕ್ಕೆ ಮಹಾರಾಷ್ಟ್ರ ಕೃಷಿ ಹವಾಮಾನ ಚೇತರಿಕೆ ಯೋಜನೆ ಎಂದು ಹೆಸರಿಟ್ಟಿದ್ದು, ವಿಶ್ವಸಂಸ್ಥೆ ಈ ಯೋಜನೆಗೆ ನೆರವು ನೀಡಲಿದೆ. ಮಹಾರಾಷ್ಟ್ರದ ಈ ಎರಡೂ ಭಾಗದಲ್ಲಿ ಕೃಷಿಗೆ ನೀರಾವರಿ, ವೈಜ್ಞಾನಿಕ ವಿಧಾನ ಅಳವಡಿಕೆ ಸೇರಿ ಹಲವು ಅಭಿವೃದ್ಧಿಗಾಗಿ ಹಣ ವಿನಿಯೋಗಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರವೊಂದು ತನ್ನ ರಾಜ್ಯದ ಜನರ ಒಳಿತಿಗಾಗಿ ವಿಶ್ವಸಂಸ್ಥೆಯೊಂದಿಗೆ ಮಹತ್ತರ ಒಪ್ಪಂದ ಮಾಡಿಕೊಂಡು ಸಾವಿರಾರು ಕೋಟಿ ರೂ. ವ್ಯಯಿಸುತ್ತಿರುವುದು ರೈತರ ಹಿತದೃಷ್ಟಿಯಿಂದ ಶ್ಲಾಘನೀಯವಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂತಹ ಯೋಜನೆ ಜಾರಿಯಾಗಿ ರೈತರ ಕಷ್ಟ ನೀಗಲಿ ಎಂಬುದೇ ಆಶಯವಾಗಿದೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search