• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ನರೇಂದ್ರ ಮೋದಿ ಅವರೇ ಉಪವಾಸ ಕೂರುವಂತಾಗಲು ಕಾಂಗ್ರೆಸ್ ಹೇಗೆ ಕಾರಣ ಗೊತ್ತೇ?

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವಾರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ಸಿನ ಮುಖಂಡರು ಹೊಟ್ಟೆ ಬಿರಿಯೋ ತನಕ ತಿಂದು ಉಪವಾಸ ಆಚರಿಸುವ ಮೂಲಕ ಉಪವಾಸದ ಮೌಲ್ಯವನ್ನು ಕಳೆದುಬಿಟ್ಟರು. ಅಷ್ಟರಮಟ್ಟಿಗೆ ಕಾಂಗ್ರೆಸ್ ಜನರ ನಂಬಿಕೆಯಿಂದ ದೂರ ಉಳಿಯುವಂತೆ ಮಾಡಿತು ಈ ಪ್ರಕರಣ.

ಆದರೆ ಪ್ರಧಾನಿಯಂಥ ಪ್ರಧಾನಿಯವರೇ ಇಂದು ಉಪವಾಸ ಆಚರಿಸುತ್ತಿದ್ದಾರೆ. ಅದೂ ಏಕೆ ಗೊತ್ತಾ? ಇದೇ ಕಾಂಗ್ರೆಸ್ಸಿನ ಉಪಟಳದಿಂದ. ಹೌದು, ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಕಲಾಪದಲ್ಲಿ ಬರೀ ಗದ್ದಲ ಎಬ್ಬಿಸುವ ಮೂಲಕ ಸುಗಮವಾಗಿ ಕಲಾಪ ನಡೆಯಲು ಬಿಡದ ಕಾಂಗ್ರೆಸ್, ದೇಶದ ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲು ಮಾಡಿತು. ಇದರಿಂದ ಮನನೊಂದಿರುವ ಪ್ರಧಾನಿ ಮೋದಿಯವರು ಗುರುವಾರ ಉಪವಾಸ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲ, ಸಂಸತ್ತಿನಲ್ಲಿ ಯಾವುದೇ ವಿಧೇಯಕ ಅಂಗೀಕಾರಕ್ಕೂ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ರಾಜ್ಯಸಭೆ ಹಾಗೂ ಲೋಕಸಭೆಯ ಅಮೂಲ್ಯ 250 ಗಂಟೆಯನ್ನು ವ್ಯರ್ಥಮಾಡಲಾಗಿದೆ. 2017-18ನೇ ಸಾಲಿನಲ್ಲಿ ಲೋಕಸಭೆ ಅಧಿವೇಶನಕ್ಕೆ 430 ಕೋಟಿ ರೂ. ಹಾಗೂ ರಾಜ್ಯಸಭೆಗೆ 260 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಅಧಿವೇಶನವೇ ಸುಗಮವಾಗಿ ನಡೆಯಲು ಬಿಡದ ಕಾಂಗ್ರೆಸ್ ಬಹುತೇಕ ಹಣ ನಷ್ಟ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ನಡೆದ 29 ಕಲಾಪಗಳಲ್ಲಿ ಕೇವಲ 35 ಗಂಟೆ ಮಾತ್ರ ಚರ್ಚೆಯಾಗಿದ್ದು, ಉಳಿದ ಎಲ್ಲ ಅವಧಿಯೆಲ್ಲ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಗಲಾಟೆ ನಡೆಸಿಯೇ ವ್ಯರ್ಥ ಮಾಡಿವೆ. ಖಂಡಿತವಾಗಿಯೂ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಗಲಾಟೆ ಮಾಡುವ ಹಕ್ಕು ಹೊಂದಿವೆ.

ಆದರೆ ಗಂಭೀರ ವಿಷಯಗಳಲ್ಲಿ ಸರ್ಕಾರ ಎಡವಿದಾಗ ಎಲ್ಲ ಪ್ರತಿಪಕ್ಷಗಳು ಅಧಿವೇಶನದಲ್ಲಿ ಗಲಾಟೆ, ಪ್ರತಿಭಟನೆ ಮಾಡುತ್ತವೆ. ಆದರೆ ಯಾವುದೇ ಕ್ಷುಲಕ್ಕ ಕಾರಣವೊಡ್ಡಿ ವರ್ಷದಲ್ಲಿ ನಡೆದ ಎಲ್ಲ ಕಲಾಪಕ್ಕೂ ಅಡ್ಡಿ ಮಾಡಿದರೆ, ಅಲ್ಲಿ ಸಮಯ ಹಾಗೂ ತೆರಿಗೆ ಎರಡೂ ವ್ಯರ್ಥ. ಇದರಿಂದ ಸಾರ್ವಜನಿಕರಿಗೆ ಅನ್ಯಾಯ ಮಾಡಿದಂತಾಗುತ್ತದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search