• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ನರೇಂದ್ರ ಮೋದಿ ಅವರೇ ಉಪವಾಸ ಕೂರುವಂತಾಗಲು ಕಾಂಗ್ರೆಸ್ ಹೇಗೆ ಕಾರಣ ಗೊತ್ತೇ?

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವಾರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ಸಿನ ಮುಖಂಡರು ಹೊಟ್ಟೆ ಬಿರಿಯೋ ತನಕ ತಿಂದು ಉಪವಾಸ ಆಚರಿಸುವ ಮೂಲಕ ಉಪವಾಸದ ಮೌಲ್ಯವನ್ನು ಕಳೆದುಬಿಟ್ಟರು. ಅಷ್ಟರಮಟ್ಟಿಗೆ ಕಾಂಗ್ರೆಸ್ ಜನರ ನಂಬಿಕೆಯಿಂದ ದೂರ ಉಳಿಯುವಂತೆ ಮಾಡಿತು ಈ ಪ್ರಕರಣ.

ಆದರೆ ಪ್ರಧಾನಿಯಂಥ ಪ್ರಧಾನಿಯವರೇ ಇಂದು ಉಪವಾಸ ಆಚರಿಸುತ್ತಿದ್ದಾರೆ. ಅದೂ ಏಕೆ ಗೊತ್ತಾ? ಇದೇ ಕಾಂಗ್ರೆಸ್ಸಿನ ಉಪಟಳದಿಂದ. ಹೌದು, ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಕಲಾಪದಲ್ಲಿ ಬರೀ ಗದ್ದಲ ಎಬ್ಬಿಸುವ ಮೂಲಕ ಸುಗಮವಾಗಿ ಕಲಾಪ ನಡೆಯಲು ಬಿಡದ ಕಾಂಗ್ರೆಸ್, ದೇಶದ ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲು ಮಾಡಿತು. ಇದರಿಂದ ಮನನೊಂದಿರುವ ಪ್ರಧಾನಿ ಮೋದಿಯವರು ಗುರುವಾರ ಉಪವಾಸ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲ, ಸಂಸತ್ತಿನಲ್ಲಿ ಯಾವುದೇ ವಿಧೇಯಕ ಅಂಗೀಕಾರಕ್ಕೂ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ರಾಜ್ಯಸಭೆ ಹಾಗೂ ಲೋಕಸಭೆಯ ಅಮೂಲ್ಯ 250 ಗಂಟೆಯನ್ನು ವ್ಯರ್ಥಮಾಡಲಾಗಿದೆ. 2017-18ನೇ ಸಾಲಿನಲ್ಲಿ ಲೋಕಸಭೆ ಅಧಿವೇಶನಕ್ಕೆ 430 ಕೋಟಿ ರೂ. ಹಾಗೂ ರಾಜ್ಯಸಭೆಗೆ 260 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಅಧಿವೇಶನವೇ ಸುಗಮವಾಗಿ ನಡೆಯಲು ಬಿಡದ ಕಾಂಗ್ರೆಸ್ ಬಹುತೇಕ ಹಣ ನಷ್ಟ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ನಡೆದ 29 ಕಲಾಪಗಳಲ್ಲಿ ಕೇವಲ 35 ಗಂಟೆ ಮಾತ್ರ ಚರ್ಚೆಯಾಗಿದ್ದು, ಉಳಿದ ಎಲ್ಲ ಅವಧಿಯೆಲ್ಲ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಗಲಾಟೆ ನಡೆಸಿಯೇ ವ್ಯರ್ಥ ಮಾಡಿವೆ. ಖಂಡಿತವಾಗಿಯೂ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಗಲಾಟೆ ಮಾಡುವ ಹಕ್ಕು ಹೊಂದಿವೆ.

ಆದರೆ ಗಂಭೀರ ವಿಷಯಗಳಲ್ಲಿ ಸರ್ಕಾರ ಎಡವಿದಾಗ ಎಲ್ಲ ಪ್ರತಿಪಕ್ಷಗಳು ಅಧಿವೇಶನದಲ್ಲಿ ಗಲಾಟೆ, ಪ್ರತಿಭಟನೆ ಮಾಡುತ್ತವೆ. ಆದರೆ ಯಾವುದೇ ಕ್ಷುಲಕ್ಕ ಕಾರಣವೊಡ್ಡಿ ವರ್ಷದಲ್ಲಿ ನಡೆದ ಎಲ್ಲ ಕಲಾಪಕ್ಕೂ ಅಡ್ಡಿ ಮಾಡಿದರೆ, ಅಲ್ಲಿ ಸಮಯ ಹಾಗೂ ತೆರಿಗೆ ಎರಡೂ ವ್ಯರ್ಥ. ಇದರಿಂದ ಸಾರ್ವಜನಿಕರಿಗೆ ಅನ್ಯಾಯ ಮಾಡಿದಂತಾಗುತ್ತದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search