• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ನರೇಂದ್ರ ಮೋದಿ ಅವರೇ ಉಪವಾಸ ಕೂರುವಂತಾಗಲು ಕಾಂಗ್ರೆಸ್ ಹೇಗೆ ಕಾರಣ ಗೊತ್ತೇ?

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವಾರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ಸಿನ ಮುಖಂಡರು ಹೊಟ್ಟೆ ಬಿರಿಯೋ ತನಕ ತಿಂದು ಉಪವಾಸ ಆಚರಿಸುವ ಮೂಲಕ ಉಪವಾಸದ ಮೌಲ್ಯವನ್ನು ಕಳೆದುಬಿಟ್ಟರು. ಅಷ್ಟರಮಟ್ಟಿಗೆ ಕಾಂಗ್ರೆಸ್ ಜನರ ನಂಬಿಕೆಯಿಂದ ದೂರ ಉಳಿಯುವಂತೆ ಮಾಡಿತು ಈ ಪ್ರಕರಣ.

ಆದರೆ ಪ್ರಧಾನಿಯಂಥ ಪ್ರಧಾನಿಯವರೇ ಇಂದು ಉಪವಾಸ ಆಚರಿಸುತ್ತಿದ್ದಾರೆ. ಅದೂ ಏಕೆ ಗೊತ್ತಾ? ಇದೇ ಕಾಂಗ್ರೆಸ್ಸಿನ ಉಪಟಳದಿಂದ. ಹೌದು, ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಕಲಾಪದಲ್ಲಿ ಬರೀ ಗದ್ದಲ ಎಬ್ಬಿಸುವ ಮೂಲಕ ಸುಗಮವಾಗಿ ಕಲಾಪ ನಡೆಯಲು ಬಿಡದ ಕಾಂಗ್ರೆಸ್, ದೇಶದ ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪೋಲು ಮಾಡಿತು. ಇದರಿಂದ ಮನನೊಂದಿರುವ ಪ್ರಧಾನಿ ಮೋದಿಯವರು ಗುರುವಾರ ಉಪವಾಸ ಮಾಡುತ್ತಿದ್ದಾರೆ.

ಅಷ್ಟೇ ಅಲ್ಲ, ಸಂಸತ್ತಿನಲ್ಲಿ ಯಾವುದೇ ವಿಧೇಯಕ ಅಂಗೀಕಾರಕ್ಕೂ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ರಾಜ್ಯಸಭೆ ಹಾಗೂ ಲೋಕಸಭೆಯ ಅಮೂಲ್ಯ 250 ಗಂಟೆಯನ್ನು ವ್ಯರ್ಥಮಾಡಲಾಗಿದೆ. 2017-18ನೇ ಸಾಲಿನಲ್ಲಿ ಲೋಕಸಭೆ ಅಧಿವೇಶನಕ್ಕೆ 430 ಕೋಟಿ ರೂ. ಹಾಗೂ ರಾಜ್ಯಸಭೆಗೆ 260 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಅಧಿವೇಶನವೇ ಸುಗಮವಾಗಿ ನಡೆಯಲು ಬಿಡದ ಕಾಂಗ್ರೆಸ್ ಬಹುತೇಕ ಹಣ ನಷ್ಟ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ನಡೆದ 29 ಕಲಾಪಗಳಲ್ಲಿ ಕೇವಲ 35 ಗಂಟೆ ಮಾತ್ರ ಚರ್ಚೆಯಾಗಿದ್ದು, ಉಳಿದ ಎಲ್ಲ ಅವಧಿಯೆಲ್ಲ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಗಲಾಟೆ ನಡೆಸಿಯೇ ವ್ಯರ್ಥ ಮಾಡಿವೆ. ಖಂಡಿತವಾಗಿಯೂ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಗಲಾಟೆ ಮಾಡುವ ಹಕ್ಕು ಹೊಂದಿವೆ.

ಆದರೆ ಗಂಭೀರ ವಿಷಯಗಳಲ್ಲಿ ಸರ್ಕಾರ ಎಡವಿದಾಗ ಎಲ್ಲ ಪ್ರತಿಪಕ್ಷಗಳು ಅಧಿವೇಶನದಲ್ಲಿ ಗಲಾಟೆ, ಪ್ರತಿಭಟನೆ ಮಾಡುತ್ತವೆ. ಆದರೆ ಯಾವುದೇ ಕ್ಷುಲಕ್ಕ ಕಾರಣವೊಡ್ಡಿ ವರ್ಷದಲ್ಲಿ ನಡೆದ ಎಲ್ಲ ಕಲಾಪಕ್ಕೂ ಅಡ್ಡಿ ಮಾಡಿದರೆ, ಅಲ್ಲಿ ಸಮಯ ಹಾಗೂ ತೆರಿಗೆ ಎರಡೂ ವ್ಯರ್ಥ. ಇದರಿಂದ ಸಾರ್ವಜನಿಕರಿಗೆ ಅನ್ಯಾಯ ಮಾಡಿದಂತಾಗುತ್ತದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search