• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಶ್ನೆಪತ್ರಿಕೆ ಬಹಿರಂಗಕ್ಕೂ ಮೋದಿ ಅವರನ್ನೇ ಟೀಕಿಸಿದವರಿಗೆ ಪ್ರತ್ಯುತ್ತರವಾಗಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್

TNN Correspondent Posted On April 12, 2018


  • Share On Facebook
  • Tweet It

ದೆಹಲಿ: ಇತ್ತೀಚೆಗೆ ದೇಶದಲ್ಲಿ ಯಾವುದೇ ಮೂಲೆಯಲ್ಲಿ ಯಾವುದೇ ಅವಾಂತರವಾಗಲಿ, ಅದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂಬಂತೆ ಬಿಂಬಿಸಲಾಗುತ್ತದೆ. ಕರ್ನಾಟಕದಲ್ಲಿ ಯಾರ ಹತ್ಯೆಯಾದರೂ, ಯಾವನೋ ಉದ್ಯಮಿ ಬ್ಯಾಂಕುಗಳಿಗೆ ಮೋಸ ಮಾಡಿದರೂ ಅದಕ್ಕೆಲ್ಲ ಕಾರಣ ಮೋದಿಯತ್ತಲೇ ಬೆರಳು ತೋರಿಸುತ್ತಾರೆ.

ಅದೇ ರೀತಿ ಇತ್ತೀಚೆಗೆ ದ್ವಿತೀಯ ಪಿಯುಸಿಯ ಅರ್ಥಶಾಸ್ತ್ರ ಹಾಗೂ ಹತ್ತನೇ ತರಗತಿಯ ಗಣಿತ ಪ್ರಶ್ನೆಪತ್ರಿಕೆಗಳು ಅಚಾತುರ್ಯವಾಗಿ ಬಹಿರಂಗವಾದಾಗಲೂ ಇದಕ್ಕೆಲ್ಲ ಪ್ರಧಾನಿ ಮೋದಿ ಅವರೇ ಕಾರಣ, ಅವರೇ ನಿಂತು ಪ್ರಶ್ನೆಪತ್ರಿಕೆ ಬಹಿರಂಗ ಮಾಡಿಸಿದರು ಎಂಬಂತೆ ಬೊಬ್ಬೆ ಹಾಕಲಾಯಿತು.

ಆದರೂ ಇದಕ್ಕೆ ಪ್ರಧಾನಿ ಮೋದಿ ಅವರು ಒಂದೇ ಒಂದು ಮಾತು ಆಡಲಿಲ್ಲ. ಆದರೆ ಈಗ ಕೇಂದ್ರ ಪ್ರಾಯೋಗಿಕ ಅಂಶಗಳ ಜಾರಿ ಮೂಲಕ ಟೀಕಿಸಿದವರಿಗೆ ಪ್ರತ್ಯುತ್ತರ ನೀಡಲು ಮುಂದಾಗಿದ್ದು, ಇನ್ನು ಮುಂದೆ ಪ್ರಶ್ನೆಪತ್ರಿಕೆ ಬಹಿರಂಗವಾಗದಿರಲು ಮಾಸ್ಟರ್ ಪ್ಲಾನ್ ಮಾಡಿದೆ.

ಹೌದು, ಪ್ರಶ್ನೆಪತ್ರಿಕೆ ಬಹಿರಂಗದ ಹಿಂದಿನ ಕಾಣದ ಕೈಗಳನ್ನು ಭೇದಿಸುವುದು ಹಾಗೂ ಮುಂದೆ ಪ್ರಶ್ನೆಪತ್ರಿಕೆ ಬಹಿರಂಗವಾಗದಂತೆ ತಡೆಯಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸರ್ವ ಅಧಿಕಾರಗಳುಳ್ಳ ಸಮಿತಿಯೊಂದನ್ನು ರಚಿಸಿದ್ದು, ಇನ್ನು ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವ ಹಾಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ಇದಕ್ಕಾಗಿ ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ನಿವೃತ್ತ ಕಾರ್ಯದರ್ಶಿ ವಿನಯ್ ಶೀಲ್ ಅವರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯೊಂದು ರಚಿಸಲಾಗಿದೆ. ಈ ತಂಡ ಇತ್ತೀಚೆಗೆ ಪ್ರಶ್ನೆಪತ್ರಿಕೆ ಹೇಗೆ ಬಹಿರಂಗವಾದವು? ಯಾವ ರೀತಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಯಿತು? ಇದರಲ್ಲಿ ಯಾರ ಕೈವಾಡವಿದೆ, ಯಾರ ವೈಫಲ್ಯವಿದೆ ಎಂಬುದು ಸೇರಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ವರದಿ ತಯಾರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಯಾವುದೇ ಅಚಾತುರ್ಯ, ಅನಾಹುತ ನಡೆದರೂ ತಕ್ಷಣ ಕಾರ್ಯಪ್ರವೃತ್ತವಾಗುವ ಮೂಲಕ ಅದಕ್ಕೆ ಕ್ರಮ ಕೈಗೊಳ್ಳುತ್ತದೆ. ಇತ್ತೀಚೆಗೆ ಬ್ಯಾಂಕ್ ಹಗರಣ ನಡೆದಾಗಲೂ ಮೋದಿ ವಿರುದ್ಧವೇ ಆರೋಪ ಮಾಡಲಾಗಿತ್ತು. ಆದರೆ ಎಂದಿನಂತೆ ಟೀಕೆಗೆ ಕಿವಿಗೊಡದ ಕೇಂದ್ರ ಸರ್ಕಾರ ಬ್ಯಾಂಕುಗಳಿಗೆ ಮೋಸ ಮಾಡಿದ ಉದ್ಯಮಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಳ್ಳುತ್ತಿದೆ ಎಂಬುದಕ್ಕೆ ನೀರವ್ ಮೋದಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವುದೇ ಸಾಕ್ಷಿಯಾಗಿದೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search