• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಶ್ನೆಪತ್ರಿಕೆ ಬಹಿರಂಗಕ್ಕೂ ಮೋದಿ ಅವರನ್ನೇ ಟೀಕಿಸಿದವರಿಗೆ ಪ್ರತ್ಯುತ್ತರವಾಗಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್

TNN Correspondent Posted On April 12, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ದೇಶದಲ್ಲಿ ಯಾವುದೇ ಮೂಲೆಯಲ್ಲಿ ಯಾವುದೇ ಅವಾಂತರವಾಗಲಿ, ಅದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂಬಂತೆ ಬಿಂಬಿಸಲಾಗುತ್ತದೆ. ಕರ್ನಾಟಕದಲ್ಲಿ ಯಾರ ಹತ್ಯೆಯಾದರೂ, ಯಾವನೋ ಉದ್ಯಮಿ ಬ್ಯಾಂಕುಗಳಿಗೆ ಮೋಸ ಮಾಡಿದರೂ ಅದಕ್ಕೆಲ್ಲ ಕಾರಣ ಮೋದಿಯತ್ತಲೇ ಬೆರಳು ತೋರಿಸುತ್ತಾರೆ.

ಅದೇ ರೀತಿ ಇತ್ತೀಚೆಗೆ ದ್ವಿತೀಯ ಪಿಯುಸಿಯ ಅರ್ಥಶಾಸ್ತ್ರ ಹಾಗೂ ಹತ್ತನೇ ತರಗತಿಯ ಗಣಿತ ಪ್ರಶ್ನೆಪತ್ರಿಕೆಗಳು ಅಚಾತುರ್ಯವಾಗಿ ಬಹಿರಂಗವಾದಾಗಲೂ ಇದಕ್ಕೆಲ್ಲ ಪ್ರಧಾನಿ ಮೋದಿ ಅವರೇ ಕಾರಣ, ಅವರೇ ನಿಂತು ಪ್ರಶ್ನೆಪತ್ರಿಕೆ ಬಹಿರಂಗ ಮಾಡಿಸಿದರು ಎಂಬಂತೆ ಬೊಬ್ಬೆ ಹಾಕಲಾಯಿತು.

ಆದರೂ ಇದಕ್ಕೆ ಪ್ರಧಾನಿ ಮೋದಿ ಅವರು ಒಂದೇ ಒಂದು ಮಾತು ಆಡಲಿಲ್ಲ. ಆದರೆ ಈಗ ಕೇಂದ್ರ ಪ್ರಾಯೋಗಿಕ ಅಂಶಗಳ ಜಾರಿ ಮೂಲಕ ಟೀಕಿಸಿದವರಿಗೆ ಪ್ರತ್ಯುತ್ತರ ನೀಡಲು ಮುಂದಾಗಿದ್ದು, ಇನ್ನು ಮುಂದೆ ಪ್ರಶ್ನೆಪತ್ರಿಕೆ ಬಹಿರಂಗವಾಗದಿರಲು ಮಾಸ್ಟರ್ ಪ್ಲಾನ್ ಮಾಡಿದೆ.

ಹೌದು, ಪ್ರಶ್ನೆಪತ್ರಿಕೆ ಬಹಿರಂಗದ ಹಿಂದಿನ ಕಾಣದ ಕೈಗಳನ್ನು ಭೇದಿಸುವುದು ಹಾಗೂ ಮುಂದೆ ಪ್ರಶ್ನೆಪತ್ರಿಕೆ ಬಹಿರಂಗವಾಗದಂತೆ ತಡೆಯಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸರ್ವ ಅಧಿಕಾರಗಳುಳ್ಳ ಸಮಿತಿಯೊಂದನ್ನು ರಚಿಸಿದ್ದು, ಇನ್ನು ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವ ಹಾಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ಇದಕ್ಕಾಗಿ ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ನಿವೃತ್ತ ಕಾರ್ಯದರ್ಶಿ ವಿನಯ್ ಶೀಲ್ ಅವರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯೊಂದು ರಚಿಸಲಾಗಿದೆ. ಈ ತಂಡ ಇತ್ತೀಚೆಗೆ ಪ್ರಶ್ನೆಪತ್ರಿಕೆ ಹೇಗೆ ಬಹಿರಂಗವಾದವು? ಯಾವ ರೀತಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಯಿತು? ಇದರಲ್ಲಿ ಯಾರ ಕೈವಾಡವಿದೆ, ಯಾರ ವೈಫಲ್ಯವಿದೆ ಎಂಬುದು ಸೇರಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ವರದಿ ತಯಾರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಯಾವುದೇ ಅಚಾತುರ್ಯ, ಅನಾಹುತ ನಡೆದರೂ ತಕ್ಷಣ ಕಾರ್ಯಪ್ರವೃತ್ತವಾಗುವ ಮೂಲಕ ಅದಕ್ಕೆ ಕ್ರಮ ಕೈಗೊಳ್ಳುತ್ತದೆ. ಇತ್ತೀಚೆಗೆ ಬ್ಯಾಂಕ್ ಹಗರಣ ನಡೆದಾಗಲೂ ಮೋದಿ ವಿರುದ್ಧವೇ ಆರೋಪ ಮಾಡಲಾಗಿತ್ತು. ಆದರೆ ಎಂದಿನಂತೆ ಟೀಕೆಗೆ ಕಿವಿಗೊಡದ ಕೇಂದ್ರ ಸರ್ಕಾರ ಬ್ಯಾಂಕುಗಳಿಗೆ ಮೋಸ ಮಾಡಿದ ಉದ್ಯಮಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಳ್ಳುತ್ತಿದೆ ಎಂಬುದಕ್ಕೆ ನೀರವ್ ಮೋದಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವುದೇ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search