• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಕೀಲಿಕೆ ಓದಿದ ನಿಮಗೆ ನೀತಿ ಸಂಹಿತೆಯ ಜ್ಞಾನ ಇಲ್ಲವೇ?

TNN Correspondent Posted On April 13, 2018
0


0
Shares
  • Share On Facebook
  • Tweet It

ಮೈಸೂರು: ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಎಲ್ ಬಿ ಓದಿದವರು. ಕೆಲವು ವರ್ಷ ವಕೀಲಿಕೆಯನ್ನೂ ಮಾಡಿದವರು. ಮೇಲಾಗಿ ಕಾನೂನು ತಿಳಿದುಕೊಂಡವರು. ಇದೇ ಹೆಸರಲ್ಲಿ ಕೆಲವೊಮ್ಮೆ ಬಡಾಯಿಯನ್ನೂ ಕೊಚ್ಚಿಕೊಳ್ಳುವವರು.

ಆದರೆ ಇಷ್ಟೆಲ್ಲ ತಿಳಿದುಕೊಂಡಿರುವ, ಲಾಯರ್ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ನೀತಿ ಸಂಹಿತೆಯ ಬಗ್ಗೆ ಗೊತ್ತಿಲ್ಲವೇ ಎಂಬ ಅನುಮಾನ ಕಾಡುವಂತಹ ಪ್ರಕರಣವೊಂದು ಸುದ್ದಿಯಾಗಿದೆ.

ಹೌದು, ಎಚ್.ಡಿ.ಕೋಟೆ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿಬಡವರಿಗೆ ವಿತರಿಸುವ ತೊಗರಿ ಬೇಳೆ ಪ್ಯಾಕೆಟ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಡಿತರ ಪದಾರ್ಥಗಳ ಮೇಲೆ ಇರುವ ರಾಜಕಾರಣಿಗಳ ಭಾವಚಿತ್ರ ಮುಚ್ಚಿಸಿ ವಿತರಣೆ ಮಾಡಬೇಕು. ಆದರೆ ಸಿದ್ದರಾಮಯ್ಯನವರು ಮತದ ಆಸೆಗಾಗಿ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚಿಸದೆ, ಅಧಿಕಾರಿಗಳಿಂದಲೂ ಮಾಹಿತಿ ನೀಡಿಸದೆ ವಿತರಿಸುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಕೂಡಲೇ ಈ ಕುರಿತು ಸುದ್ದಿಯಾಗುತ್ತಲೇ ಚುನಾವಣಾಧಿಕಾರಿ ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಪ್ಯಾಕೇಟ್ ಮೇಲಿದ್ದ ಸಿದ್ದರಾಮಯ್ಯನವರ ಭಾವಚಿತ್ರ ಕಾಣದಂತೆ ಸ್ಟಿಕ್ಕರ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಮತದ ಆಸೆಗಾಗಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಕುಕ್ಕರ್ ನೀಡುತ್ತಿದ್ದು, ಒಂದು ಲಾರಿ ಕುಕ್ಕರ್ ವಶಪಡಿಸಿಕೊಳ್ಳಲಾಗಿತ್ತು. ಈಗ ಮುಖ್ಯಮಂತ್ರಿ ಅವರ ಭಾವಚಿತ್ರ ಇರುವ ಪಡಿತರ ಧಾನ್ಯದ ಪ್ಯಾಕೆಟ್ ನೀಡಲಾಗುತ್ತಿದೆ. ಹೇಳಿ ಸಿದ್ದರಾಮಯ್ಯನವರೇ ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ? ನೀವು ಕಲಿತ ಕಾನೂನು ಕಾಲೇಜಿನಲ್ಲಿ ಇದನ್ನೆಲ್ಲ ಹೇಳಿಕೊಟ್ಟಿಲ್ಲವೇ ಅಥವಾ ಮತ ಪಡೆಯಲು ನೀವು ಮಾಡುತ್ತಿರುವ ತಂತ್ರವೇ?

 

 

 

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search