• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಕೀಲಿಕೆ ಓದಿದ ನಿಮಗೆ ನೀತಿ ಸಂಹಿತೆಯ ಜ್ಞಾನ ಇಲ್ಲವೇ?

TNN Correspondent Posted On April 13, 2018
0


0
Shares
  • Share On Facebook
  • Tweet It

ಮೈಸೂರು: ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಎಲ್ ಬಿ ಓದಿದವರು. ಕೆಲವು ವರ್ಷ ವಕೀಲಿಕೆಯನ್ನೂ ಮಾಡಿದವರು. ಮೇಲಾಗಿ ಕಾನೂನು ತಿಳಿದುಕೊಂಡವರು. ಇದೇ ಹೆಸರಲ್ಲಿ ಕೆಲವೊಮ್ಮೆ ಬಡಾಯಿಯನ್ನೂ ಕೊಚ್ಚಿಕೊಳ್ಳುವವರು.

ಆದರೆ ಇಷ್ಟೆಲ್ಲ ತಿಳಿದುಕೊಂಡಿರುವ, ಲಾಯರ್ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ನೀತಿ ಸಂಹಿತೆಯ ಬಗ್ಗೆ ಗೊತ್ತಿಲ್ಲವೇ ಎಂಬ ಅನುಮಾನ ಕಾಡುವಂತಹ ಪ್ರಕರಣವೊಂದು ಸುದ್ದಿಯಾಗಿದೆ.

ಹೌದು, ಎಚ್.ಡಿ.ಕೋಟೆ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿಬಡವರಿಗೆ ವಿತರಿಸುವ ತೊಗರಿ ಬೇಳೆ ಪ್ಯಾಕೆಟ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಡಿತರ ಪದಾರ್ಥಗಳ ಮೇಲೆ ಇರುವ ರಾಜಕಾರಣಿಗಳ ಭಾವಚಿತ್ರ ಮುಚ್ಚಿಸಿ ವಿತರಣೆ ಮಾಡಬೇಕು. ಆದರೆ ಸಿದ್ದರಾಮಯ್ಯನವರು ಮತದ ಆಸೆಗಾಗಿ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚಿಸದೆ, ಅಧಿಕಾರಿಗಳಿಂದಲೂ ಮಾಹಿತಿ ನೀಡಿಸದೆ ವಿತರಿಸುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಕೂಡಲೇ ಈ ಕುರಿತು ಸುದ್ದಿಯಾಗುತ್ತಲೇ ಚುನಾವಣಾಧಿಕಾರಿ ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಪ್ಯಾಕೇಟ್ ಮೇಲಿದ್ದ ಸಿದ್ದರಾಮಯ್ಯನವರ ಭಾವಚಿತ್ರ ಕಾಣದಂತೆ ಸ್ಟಿಕ್ಕರ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಮತದ ಆಸೆಗಾಗಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಕುಕ್ಕರ್ ನೀಡುತ್ತಿದ್ದು, ಒಂದು ಲಾರಿ ಕುಕ್ಕರ್ ವಶಪಡಿಸಿಕೊಳ್ಳಲಾಗಿತ್ತು. ಈಗ ಮುಖ್ಯಮಂತ್ರಿ ಅವರ ಭಾವಚಿತ್ರ ಇರುವ ಪಡಿತರ ಧಾನ್ಯದ ಪ್ಯಾಕೆಟ್ ನೀಡಲಾಗುತ್ತಿದೆ. ಹೇಳಿ ಸಿದ್ದರಾಮಯ್ಯನವರೇ ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ? ನೀವು ಕಲಿತ ಕಾನೂನು ಕಾಲೇಜಿನಲ್ಲಿ ಇದನ್ನೆಲ್ಲ ಹೇಳಿಕೊಟ್ಟಿಲ್ಲವೇ ಅಥವಾ ಮತ ಪಡೆಯಲು ನೀವು ಮಾಡುತ್ತಿರುವ ತಂತ್ರವೇ?

 

 

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search