• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಕೀಲಿಕೆ ಓದಿದ ನಿಮಗೆ ನೀತಿ ಸಂಹಿತೆಯ ಜ್ಞಾನ ಇಲ್ಲವೇ?

TNN Correspondent Posted On April 13, 2018
0


0
Shares
  • Share On Facebook
  • Tweet It

ಮೈಸೂರು: ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಎಲ್ ಬಿ ಓದಿದವರು. ಕೆಲವು ವರ್ಷ ವಕೀಲಿಕೆಯನ್ನೂ ಮಾಡಿದವರು. ಮೇಲಾಗಿ ಕಾನೂನು ತಿಳಿದುಕೊಂಡವರು. ಇದೇ ಹೆಸರಲ್ಲಿ ಕೆಲವೊಮ್ಮೆ ಬಡಾಯಿಯನ್ನೂ ಕೊಚ್ಚಿಕೊಳ್ಳುವವರು.

ಆದರೆ ಇಷ್ಟೆಲ್ಲ ತಿಳಿದುಕೊಂಡಿರುವ, ಲಾಯರ್ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ನೀತಿ ಸಂಹಿತೆಯ ಬಗ್ಗೆ ಗೊತ್ತಿಲ್ಲವೇ ಎಂಬ ಅನುಮಾನ ಕಾಡುವಂತಹ ಪ್ರಕರಣವೊಂದು ಸುದ್ದಿಯಾಗಿದೆ.

ಹೌದು, ಎಚ್.ಡಿ.ಕೋಟೆ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿಬಡವರಿಗೆ ವಿತರಿಸುವ ತೊಗರಿ ಬೇಳೆ ಪ್ಯಾಕೆಟ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಡಿತರ ಪದಾರ್ಥಗಳ ಮೇಲೆ ಇರುವ ರಾಜಕಾರಣಿಗಳ ಭಾವಚಿತ್ರ ಮುಚ್ಚಿಸಿ ವಿತರಣೆ ಮಾಡಬೇಕು. ಆದರೆ ಸಿದ್ದರಾಮಯ್ಯನವರು ಮತದ ಆಸೆಗಾಗಿ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚಿಸದೆ, ಅಧಿಕಾರಿಗಳಿಂದಲೂ ಮಾಹಿತಿ ನೀಡಿಸದೆ ವಿತರಿಸುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಕೂಡಲೇ ಈ ಕುರಿತು ಸುದ್ದಿಯಾಗುತ್ತಲೇ ಚುನಾವಣಾಧಿಕಾರಿ ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಪ್ಯಾಕೇಟ್ ಮೇಲಿದ್ದ ಸಿದ್ದರಾಮಯ್ಯನವರ ಭಾವಚಿತ್ರ ಕಾಣದಂತೆ ಸ್ಟಿಕ್ಕರ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಮತದ ಆಸೆಗಾಗಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಕುಕ್ಕರ್ ನೀಡುತ್ತಿದ್ದು, ಒಂದು ಲಾರಿ ಕುಕ್ಕರ್ ವಶಪಡಿಸಿಕೊಳ್ಳಲಾಗಿತ್ತು. ಈಗ ಮುಖ್ಯಮಂತ್ರಿ ಅವರ ಭಾವಚಿತ್ರ ಇರುವ ಪಡಿತರ ಧಾನ್ಯದ ಪ್ಯಾಕೆಟ್ ನೀಡಲಾಗುತ್ತಿದೆ. ಹೇಳಿ ಸಿದ್ದರಾಮಯ್ಯನವರೇ ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ? ನೀವು ಕಲಿತ ಕಾನೂನು ಕಾಲೇಜಿನಲ್ಲಿ ಇದನ್ನೆಲ್ಲ ಹೇಳಿಕೊಟ್ಟಿಲ್ಲವೇ ಅಥವಾ ಮತ ಪಡೆಯಲು ನೀವು ಮಾಡುತ್ತಿರುವ ತಂತ್ರವೇ?

 

 

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search