• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇಕ್ ಇಂಡಿಯಾ ಯೋಜನೆಗೆ ನಮೋ ಎಂದ ಅಮರಿಕ, ಭಾರತ ಬಯಸಿದರೆ ಜಾವೆಲಿನ್ ಕ್ಷಿಪಣಿ ತಯಾರಿಸಲು ಸಹ ಒಪ್ಪಿಗೆ

TNN Correspondent Posted On April 13, 2018
0


0
Shares
  • Share On Facebook
  • Tweet It

ದೆಹಲಿ: ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರಿಗೆ ವೀಸಾ ಸಹ ನೀಡಲು ಒಪ್ಪದಿದ್ದ ಅಮೆರಿಕ ಈಗ ವಿಶ್ವ ನಾಯಕ ನರೇಂದ್ರ ಮೋದಿ ಅವರಿಗೆ ಮನಸೋತಿದ್ದು, ಅಮೆರಿಕದ ಲಾಖೀಡ್ ಮಾರ್ಟೀನ್ ಕಂಪನಿ ಭಾರತಕ್ಕೆ ಯುದ್ಧ ವಿಮಾನ ತಯಾರಿಸಿ ನೀಡಲು ಒಪ್ಪಿಗೆ ಸೂಚಿಸಿತ್ತು.

ಆದರೆ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಈ ಕಂಪನಿ ಈಗ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಭಾರತದಲ್ಲಿ ಲಾಖೀಡ್ ಮಾರ್ಟಿನ್ ಸಂಸ್ಥೆ ಭಾರತದಲ್ಲಿ ಘಟಕ ಸ್ಥಾಪಿಸಿ ಮೇಕ್ ಇನ್ ಇಂಡಿಯಾ ಮೂಲಕ ಎಫ್ 16 ಯುದ್ಧ ವಿಮಾನ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ದಿನಗಳಲ್ಲಿ ಸೇನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅವಕಾಶ ಸಿಕ್ಕರೆ ನಿರ್ಮಿಸಲಾಗುವುದು ಎಂದು ಕಂಪನಿ ಆಶಯ ವ್ಯಕ್ತಪಡಿಸಿದೆ.

ಈ ಕುರಿತು ಕಂಪನಿಯ ಅಂತಾರಾಷ್ಟ್ರೀಯ ಉದ್ಯಮ ವಿಭಾಗದ ಮುಖ್ಯಸ್ಥರಾಗಿರುವ ರಾಂಡಾಲ್ ಎಲ್. ಹೌವಾರ್ಡ್ ಮಾಹಿತಿ ನೀಡಿದ್ದು, ಭಾರತ ಸರ್ಕಾರ ಬಯಸಿದರೆ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ ಭಾರತದಲ್ಲಿ ಜಾವೆಲಿನ್ ಕ್ಷಿಪಣಿ ತಯಾರಿಸಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಭಾರತದ ವಾಯುದಳ ಬಲಪಡಿಸುವ ದೃಷ್ಟಿಯಿಂದ ಸರ್ಕಾರ 15 ಶತಕೋಟಿ ಡಾಲರ್ ವೆಚ್ಚದಲ್ಲಿ 120 ಎಫ್ 16 ಯುದ್ಧ ವಿಮಾನ ತಯಾರಿಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅಮೆರಿಕ ಕಂಪನಿ ಸಿದ್ಧವಿರುವುದು ಸಂತಸದ  ಸಂಗತಿ. ಅದೂ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ!

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search