• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೇಕ್ ಇಂಡಿಯಾ ಯೋಜನೆಗೆ ನಮೋ ಎಂದ ಅಮರಿಕ, ಭಾರತ ಬಯಸಿದರೆ ಜಾವೆಲಿನ್ ಕ್ಷಿಪಣಿ ತಯಾರಿಸಲು ಸಹ ಒಪ್ಪಿಗೆ

TNN Correspondent Posted On April 13, 2018


  • Share On Facebook
  • Tweet It

ದೆಹಲಿ: ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರಿಗೆ ವೀಸಾ ಸಹ ನೀಡಲು ಒಪ್ಪದಿದ್ದ ಅಮೆರಿಕ ಈಗ ವಿಶ್ವ ನಾಯಕ ನರೇಂದ್ರ ಮೋದಿ ಅವರಿಗೆ ಮನಸೋತಿದ್ದು, ಅಮೆರಿಕದ ಲಾಖೀಡ್ ಮಾರ್ಟೀನ್ ಕಂಪನಿ ಭಾರತಕ್ಕೆ ಯುದ್ಧ ವಿಮಾನ ತಯಾರಿಸಿ ನೀಡಲು ಒಪ್ಪಿಗೆ ಸೂಚಿಸಿತ್ತು.

ಆದರೆ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಈ ಕಂಪನಿ ಈಗ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಭಾರತದಲ್ಲಿ ಲಾಖೀಡ್ ಮಾರ್ಟಿನ್ ಸಂಸ್ಥೆ ಭಾರತದಲ್ಲಿ ಘಟಕ ಸ್ಥಾಪಿಸಿ ಮೇಕ್ ಇನ್ ಇಂಡಿಯಾ ಮೂಲಕ ಎಫ್ 16 ಯುದ್ಧ ವಿಮಾನ ತಯಾರಿಸುವ ಹೊಣೆ ಹೊತ್ತಿದ್ದು, ಮುಂದಿನ ದಿನಗಳಲ್ಲಿ ಸೇನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅವಕಾಶ ಸಿಕ್ಕರೆ ನಿರ್ಮಿಸಲಾಗುವುದು ಎಂದು ಕಂಪನಿ ಆಶಯ ವ್ಯಕ್ತಪಡಿಸಿದೆ.

ಈ ಕುರಿತು ಕಂಪನಿಯ ಅಂತಾರಾಷ್ಟ್ರೀಯ ಉದ್ಯಮ ವಿಭಾಗದ ಮುಖ್ಯಸ್ಥರಾಗಿರುವ ರಾಂಡಾಲ್ ಎಲ್. ಹೌವಾರ್ಡ್ ಮಾಹಿತಿ ನೀಡಿದ್ದು, ಭಾರತ ಸರ್ಕಾರ ಬಯಸಿದರೆ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ ಭಾರತದಲ್ಲಿ ಜಾವೆಲಿನ್ ಕ್ಷಿಪಣಿ ತಯಾರಿಸಲು ನಾವು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಭಾರತದ ವಾಯುದಳ ಬಲಪಡಿಸುವ ದೃಷ್ಟಿಯಿಂದ ಸರ್ಕಾರ 15 ಶತಕೋಟಿ ಡಾಲರ್ ವೆಚ್ಚದಲ್ಲಿ 120 ಎಫ್ 16 ಯುದ್ಧ ವಿಮಾನ ತಯಾರಿಕೆಗೆ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಭಾರತಕ್ಕಾಗಿ ಜಾವೆಲಿನ್ ಕ್ಷಿಪಣಿ ಸಹ ತಯಾರಿಸಲು ಅಮೆರಿಕ ಕಂಪನಿ ಸಿದ್ಧವಿರುವುದು ಸಂತಸದ  ಸಂಗತಿ. ಅದೂ ಮೇಕ್ ಇಂಡಿಯಾ ಯೋಜನೆಯ ಅನ್ವಯವೇ!

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search