• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನಾವೋ ಅತ್ಯಾಚಾರ ಆರೋಪಿಗಳ ಶಿಕ್ಷೆ ಕುರಿತು ಯೋಗಿ ಆದಿತ್ಯನಾಥರು ಏನು ಹೇಳಿದ್ದಾರೆ ಗೊತ್ತೇ?

TNN Correspondent Posted On April 14, 2018
0


0
Shares
  • Share On Facebook
  • Tweet It

ಲಖನೌ: ಬಿಜೆಪಿ ಆಡಳಿತದ ಯಾವುದೇ ರಾಜ್ಯದಲ್ಲಿ ಯಾವುದೇ ಅಚಾತುರ್ಯ, ಅನಾಹುತವಾದರೂ ಕಾಂಗ್ರೆಸ್ಸಿಗರು ದೇಶವೇ ಕೇಳುವ ಹಾಗೆ ಬೊಬ್ಬೆ ಹಾಕುತ್ತಾರೆ. ಇದು ಪ್ರಧಾನಿ ಮೋದಿ ಅವರ ವೈಫಲ್ಯ ಎಂದು ಘೀಳಿಡುತ್ತಾರೆ.

ಆದರೆ ಬಿಜೆಪಿ ಮಾತ್ರ, ಯಾವುದೇ ಅನಾಹುತ ನಡೆದರೂ ನ್ಯಾಯಸಮ್ಮತವಾಗಿ ಆಡಳಿತ ನಡೆಸುತ್ತಿದೆ. ಇದಕ್ಕೆ ಪ್ರತಿರೂಪವಾಗಿ ಉನ್ನಾವೋದಲ್ಲಿ 16 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಪ್ರಕರಣದಲ್ಲಿ ಬಿಜೆಪಿ ಶಾಸಕರೊಬ್ಬರ ಹೆಸರು ಕೇಳಿಬಂದಿದ್ದು, ಈ ಕುರಿತು ಯೋಗಿ ಆದಿತ್ಯನಾಥ ಖಡಕ್ ಆಗಿ ಮಾತನಾಡಿದ್ದಾರೆ.

ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥರು, ಅಪರಾಧ ಎಸಗುವ ಯಾರೇ ಆದರೂ ನುಣುಚಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿ ಎಷ್ಟೇ ಪ್ರಭಾವಿಯಾಗಿದ್ದರೂ ಅವರಿಗೆ ಶಿಕ್ಷೆ ವಿಧಿಸದೆ ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಖಡಕ್ ಮಾತುಗಳನ್ನಾಡಿದ್ದಾರೆ.

ಅತ್ಯಾಚಾರದ ಪ್ರಕರಣದ ಕುರಿತು ಸುದ್ದಿಯಾಗುತ್ತಲೇ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಈಗಾಗಲೇ ಪ್ರಕರಣ ಭೇದಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಯೋಗಿ ತಿಳಿಸಿದ್ದಾರೆ.

ಆದಾಗ್ಯೂ ಉನ್ನಾವೋ ಎಂಬಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಎಂಬುವವರನ್ನು ಬಂಧಿಸಲಾಗಿದೆ. ಇಷ್ಟಾದರೂ ಸುಮ್ಮನಿರದ ಪ್ರತಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದು, ಇದಕ್ಕೆ ಯೋಗಿ ಆದಿತ್ಯನಾಥರು ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಅಪರಾಧಿಗಳಿಗೆ ಶಿಕ್ಷೆಯಾಗಲಿ ಎಂಬುದು ನಮ್ಮ ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search