• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಪರ್ಧಿಸಲಿಚ್ಚಿಸಿದ ಎರಡು ಕ್ಷೇತ್ರದಲ್ಲಿ ಸಿಎಂಗೆ ಸೋಲುವ ಭೀತಿ ಎಂದರೇ ಅವರ ಆಡಳಿತ ವೈಖರಿ ಎಂಥಾದ್ದು..!

ತೇಜಸ್ವಿ ಪ್ರತಾಪ, ಮೈಸೂರು Posted On April 14, 2018
0


0
Shares
  • Share On Facebook
  • Tweet It

ಸಿಎಂ ಸಿದ್ದರಾಮಯ್ಯ ಪ್ರಸ್ತುತ ದಕ್ಷಿಣ ಭಾರತದ ಮುಖ್ಯಮಂತ್ರಿಗಳಲ್ಲಿ ಬಹು ಚರ್ಚಿತ, ಇಡೀ ದೇಶದಲ್ಲಿ ಕಾಂಗ್ರೆಸ್ ಮುಕ್ತವಾದರೂ ಕೈ ಪಡೆಗೆ ಆಸರೆ ನೀಡುತ್ತಿರುವ ವ್ಯಕ್ತಿ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಕ್ಷಣದಿಂದ ಅವಕಾಶವಾದಿ ರಾಜಕಾರಣ ಮಾಡುತ್ತಲೇ ಬಂದರು. ಅದಕ್ಕೂ ಮೊದಲು ಅವರು ಪರಮೇಶ್ವರ ಅವರನ್ನು ಹಿಂಬಾಗಿಲ ಮೂಲಕ ಸೋಲಿಸಿದರು. ಅದಕ್ಕಿಂತ ಮೊದಲು ದೇವೇಗೌಡರಿಗೆ ಅನ್ಯಾಯ ಮಾಡಿದರು. ಅದೆಲ್ಲವನ್ನು ಸಹಿಸಿಕೊಂಡಿದ್ದ, ಜನ ಸಿದ್ದರಾಮಯ್ಯ ಕೈಗೆ ಅಧಿಕಾರ ನೀಡಿದರು.

ಇದೀಗ ಸಿದ್ದರಾಮಯ್ಯ ಐದು ವರ್ಷ ಪೂರ್ಣಗೊಳಿಸಿದ್ದಾರೆ. ಆಡಳಿತಾಂಗವನ್ನು ಅಧೋಗತಿಗೆ ಇಳಿಸುವ ಎಲ್ಲ ಪ್ರಯತ್ನಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ತಂಡ ಯಶಸ್ವಿಯಾಗಿ ಮಾಡಿತ್ತು. ಅದಕ್ಕೆ ಮುನ್ನುಡಿ ಬರೆದಿದ್ದು ಲೋಕಾಯುಕ್ತಕ್ಕೆ ಕೊನೆ ಮೊಳೆ ಹೊಡೆದಿದ್ದು. ಯಾವಾ ಭ್ರಷ್ಟ್ರರಿಗೆ ಸಿಂಹ ಸ್ವಪ್ನವಾಗಿದ್ದ ಲೋಕಾಯುಕ್ತ ಮುಚ್ಚಿಸಿದರೋ ಆಗಲೇ ಸಿಎಂ ಅಂತ್ಯ ಆರಂಭವಾಯಿತು ಎಂದರೆ ಅಚ್ಚರಿಯಿಲ್ಲ.

ಇಡೀ ಐದು ವರ್ಷದಲ್ಲಿ ಅತ್ತ ಸಮಾಜವಾದಿಯೂ ಅಲ್ಲ, ಜಾತ್ಯಾತೀತವಾದಿಯೂ ಅಲ್ಲ ಎಂಬತೆ ತಮ್ಮ ವರ್ತನೆಯಲ್ಲಿ ತೋರಿದ್ದರು. ಆದರೆ ನಂತರ ತಾವು ಒಬ್ಬ ಪಕ್ಕ ಎಡಬಿಡಂಗಿ ಎಂಬುದನ್ನು ಸಾಬೀತುಪಡಿಸಿದರು. ಐದು ವರ್ಷ ಅಧಿಕಾರಕ್ಕೆ ಬಂದ ತಕ್ಷಣ ಪರಿಸ್ಥಿತಿ ಹದಗೆಡಲು ಆರಂಭವಾಯಿತು. ಸಿದ್ದರಾಮಯ್ಯನ ತಮ್ಮ ಸಲಹೆಗಾರರು ಮತ್ತು ಎಡಬಿಡಂಗಿಗಳ ಸಲಹೆಯೊಂದಿಗೆ ಜಾತಿ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿದರು. ಜನರ ಮಧ್ಯೆ ಧರ್ಮ ಒಡೆಯುವ ವಿಷ ಬೀಜ ಬಿತ್ತಿದ್ದರು. ಅದರ ಪರಿಣಾಮ ಇದೀಗ ಸಿಎಂ ಸಿದ್ದರಾಮಯ್ಯ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯಗೆ ಸೂಕ್ತ ನೆಲೆ ದೊರಕದೇ ದಿನಕ್ಕೊಂದು ಕ್ಷೇತ್ರವನ್ನು ಹುಡುಕಾಡುತ್ತಾ ಓಡಾಡುತ್ತಿದ್ದಾರೆ.

ಸಿದ್ದರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ತನ್ನದೇ ಗುಪ್ತಚರ ಇಲಾಖೆ ವರದಿಯಂತೆ ಜನ ಕೈ ಎತ್ತಿದ್ದಾರೆ. ಚಾಮುಂಡೇಶ್ವರಿಯಲ್ಲಿ ಒಕ್ಕಲಿಗ ಸಮುದಾಯದವರೂ ಬಲಿಷ್ಠರಾಗಿದ್ದರೇ, ಇತ್ತ ಬಾದಾಮಿ ವೀರಶೈವ ಲಿಂಗಾಯತರ ಪ್ರಮುಖ ನೆಲೆಯಾಗಿದೆ. ಎರಡು ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಮತಗಳು ತಕ್ಕಮಟ್ಟಿಗೆ ಇವೆ. ಆದರೆ ಚಾಮುಂಡೇಶ್ವರಿಯಲ್ಲಿ ಒಕ್ಕಲಿಗ ಮತ್ತು ಬಾದಾಮಿಯಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಅತಿ ಹೆಚ್ಚು ಇದೆ. ಈ ಎರಡು ಅಂಶಗಳು ಸಿದ್ದರಾಮಯ್ಯಗೆ ಮಾರಕವಾಗಲಿದ್ದು, ಸಿದ್ದರಾಮಯ್ಯಗೆ ಕಾರ್ಯವೈಖರಿಗೆ ಜನ ಬೇಸತ್ತಿದ್ದಾರೆ. ಆದ್ದರಿಂದ ಎರಡು ಕ್ಷೇತ್ರದಲ್ಲಿ ಸಿಎಂ ಸೋಲು ಭಾಗಶಃ ಖಚಿವಾಗುತ್ತಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
ತೇಜಸ್ವಿ ಪ್ರತಾಪ, ಮೈಸೂರು January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
ತೇಜಸ್ವಿ ಪ್ರತಾಪ, ಮೈಸೂರು January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search