• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಕ್ರಮವಾಗಿ ದೇಶ ಪ್ರವೇಶಿಸಿದ ಇಬ್ಬರು ರೋಹಿಂಗ್ಯಾಗಳ ಬಂಧನ

TNN Correspondent Posted On April 15, 2018
0


0
Shares
  • Share On Facebook
  • Tweet It

ತೆಂಗ್ನೋಪಾಲ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ, ದೇಶಕ್ಕೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ಹಿಡಿದು ಜೈಲಿಗಟ್ಟುವ, ಅವರ ದೇಶಕ್ಕೆ ಮರಳಿ ಕಳುಹಿಸುವ ಕಾರ್ಯವನ್ನು ಸೈನಿಕರು, ಪೊಲೀಸರು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಇದೀಗ ಮಣಿಪುರದ ಭಾರತದ ಗಡಿಯಲ್ಲಿ ಅಕ್ರಮವಾಗಿ ನುಸುಳಿ, ಜೀವನ ಸಾಗಿಸುತ್ತಿದ್ದ ರೋಹಿಂಗ್ಯಾಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದು ವರ್ಷದಿಂದ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಮೊರ್ರೆ ನಗರದಲ್ಲಿ ವಾಸಿಸುತ್ತಿದ್ದರು. ಈ ಕುರಿತು ಮಾಹಿತಿ ಪಡೆದಿರುವ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಶೋಬಿಕ್ (26) ಮತ್ತು ಆತನ ಪತ್ನಿ ಆರೋಫಾ (26) ಬಂಧಿತರು. ಕಳೆದ ವರ್ಷದಿಂದ ಮೊರ್ರೆಯಲ್ಲಿ ವಾಸಿಸುತ್ತಿದ್ದರು. ಆದರೆ ದೇಶವನ್ನು ಯಾವಾಗ ಪ್ರವೇಶಿಸಿದ್ದರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತೆಂಗ್ನೋಪಾಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸರೆಂಗ್ತೆಮ್ ಐಬೋಂಮ್ಚಾ ತಿಳಿಸಿದ್ದಾರೆ.

ಇತ್ತೀಚೆಗೆ ಮೊರ್ರೆ ನಗರದಲ್ಲೇ ಅಕ್ರಮವಾಗಿ ದೇಶ ಪ್ರವೇಶಿಸಿ ಜೀವನ ನಡೆಸುತ್ತಿದ್ದ ಮೂವರು ರೋಹಿಂಗ್ಯಗಳನ್ನು ಬಂಧಿಸಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಇವರೆಲ್ಲರೂ ಅಪರಾಧಿ ಚಟುವಟಿಕೆಯಲ್ಲಿ ತೊಡಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಸ್ತುತ ಬಂಧಿಸಲಾಗಿರುವ ಮೊರ್ರೆ ಪಟ್ಟಣದ ಭಾರತ ಮ್ಯಾನ್ಮಾರ್ ಗಡಿಯಲ್ಲಿದ್ದು, ಕಟ್ಟುನಿಟ್ಟಿನ ಕ್ರಮ, ಅಕ್ರಮವಾಸಿಗಳ ಮೇಲೆ ಕಣ್ಗಾವಲು ಇಟ್ಟಿರುವುದರಿಂದ ಈ ಬಂಧನಗಳು ನಡೆಯುತ್ತಿವೆ. ಇತ್ತೀಚೆಗೆ ಕೇರಳದಲ್ಲೂ ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು. ಇದು ದೇಶಾದ್ಯಂತ ರೋಹಿಂಗ್ಯಾಗಳು ಅಕ್ರಮವಾಗಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂಬುದು ಸಾಬೀತಾಗುತ್ತಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search