• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಕ್ರಮವಾಗಿ ದೇಶ ಪ್ರವೇಶಿಸಿದ ಇಬ್ಬರು ರೋಹಿಂಗ್ಯಾಗಳ ಬಂಧನ

TNN Correspondent Posted On April 15, 2018
0


0
Shares
  • Share On Facebook
  • Tweet It

ತೆಂಗ್ನೋಪಾಲ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ, ದೇಶಕ್ಕೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ಹಿಡಿದು ಜೈಲಿಗಟ್ಟುವ, ಅವರ ದೇಶಕ್ಕೆ ಮರಳಿ ಕಳುಹಿಸುವ ಕಾರ್ಯವನ್ನು ಸೈನಿಕರು, ಪೊಲೀಸರು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಇದೀಗ ಮಣಿಪುರದ ಭಾರತದ ಗಡಿಯಲ್ಲಿ ಅಕ್ರಮವಾಗಿ ನುಸುಳಿ, ಜೀವನ ಸಾಗಿಸುತ್ತಿದ್ದ ರೋಹಿಂಗ್ಯಾಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದು ವರ್ಷದಿಂದ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಮೊರ್ರೆ ನಗರದಲ್ಲಿ ವಾಸಿಸುತ್ತಿದ್ದರು. ಈ ಕುರಿತು ಮಾಹಿತಿ ಪಡೆದಿರುವ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಶೋಬಿಕ್ (26) ಮತ್ತು ಆತನ ಪತ್ನಿ ಆರೋಫಾ (26) ಬಂಧಿತರು. ಕಳೆದ ವರ್ಷದಿಂದ ಮೊರ್ರೆಯಲ್ಲಿ ವಾಸಿಸುತ್ತಿದ್ದರು. ಆದರೆ ದೇಶವನ್ನು ಯಾವಾಗ ಪ್ರವೇಶಿಸಿದ್ದರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತೆಂಗ್ನೋಪಾಲ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸರೆಂಗ್ತೆಮ್ ಐಬೋಂಮ್ಚಾ ತಿಳಿಸಿದ್ದಾರೆ.

ಇತ್ತೀಚೆಗೆ ಮೊರ್ರೆ ನಗರದಲ್ಲೇ ಅಕ್ರಮವಾಗಿ ದೇಶ ಪ್ರವೇಶಿಸಿ ಜೀವನ ನಡೆಸುತ್ತಿದ್ದ ಮೂವರು ರೋಹಿಂಗ್ಯಗಳನ್ನು ಬಂಧಿಸಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಇವರೆಲ್ಲರೂ ಅಪರಾಧಿ ಚಟುವಟಿಕೆಯಲ್ಲಿ ತೊಡಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಸ್ತುತ ಬಂಧಿಸಲಾಗಿರುವ ಮೊರ್ರೆ ಪಟ್ಟಣದ ಭಾರತ ಮ್ಯಾನ್ಮಾರ್ ಗಡಿಯಲ್ಲಿದ್ದು, ಕಟ್ಟುನಿಟ್ಟಿನ ಕ್ರಮ, ಅಕ್ರಮವಾಸಿಗಳ ಮೇಲೆ ಕಣ್ಗಾವಲು ಇಟ್ಟಿರುವುದರಿಂದ ಈ ಬಂಧನಗಳು ನಡೆಯುತ್ತಿವೆ. ಇತ್ತೀಚೆಗೆ ಕೇರಳದಲ್ಲೂ ರೋಹಿಂಗ್ಯಾಗಳನ್ನು ಬಂಧಿಸಲಾಗಿತ್ತು. ಇದು ದೇಶಾದ್ಯಂತ ರೋಹಿಂಗ್ಯಾಗಳು ಅಕ್ರಮವಾಗಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂಬುದು ಸಾಬೀತಾಗುತ್ತಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search