• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕ್ರಿಯಾಶೀಲವಾದ ಐಸಿಸ್: ಮಹಿಳಾ ಸಂಘಟನೆಯ ಸಾಥ್

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಕಲ್ಲು ತೂರಾಟ, ಬಂದ್ ಸೇರಿ ದೇಶವಿದ್ರೋಹಿ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಲಗಾಮು ಹಾಕಿರುವ ಸುದ್ದಿ ಬಂದಿರುವಾಗಲೇ ಆಘಾತಕಾರಿ ಅಂಶವೊಂದನ್ನು ಕೇಂದ್ರ ಗೃಹ ಇಲಾಖೆ ಹೊರ ಹಾಕಿದೆ. ಕಾಶ್ಮೀರ ಕಣಿವೆಯಲ್ಲಿ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಐಸಿಸ್ ಭಯೋತ್ಪಾದಕ ಸಂಘಟನೆಯು ಕ್ರಿಯಾಶೀಲವಾಗಿದ್ದು, ಅದಕ್ಕೆ ಮಹಿಳಾ ಸಂಘಟನೆಯೊಂದು ಸಾಥ್ ನೀಡುತ್ತಿದೆ. ಇತ್ತೀಚೆಗೆ ಕೆಲವು ಕಡೆ ಐಸಿಸ್ ಪರ ಒಲವು ಹೊಂದುವಂತ, ಪ್ರಚೋಧನಕಾರಿ ಹೇಳಿಕೆಯುಳ್ಳ ಭಾಷಣಗಳನ್ನು ಮಾಡಲಾಗಿದೆ. ಈ ಕುರಿತು ಕಾಶ್ಮೀರ ಪೊಲೀಸರು ಎಚ್ಚರದಿಂದ ಇರಬೇಕು ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿದೆ.

ಐಸಿಸ್ ಸಂಘಟನೆಯ ಮಹಿಳಾ ಸಂಸ್ಥೆ ದೌಲತ್ ಉಲ್ ಇಸ್ಲಾಂ ಸಂಘಟನೆಯೂ ಕಾಶ್ಮೀರದಲ್ಲಿ ಐಸಿಸ್ ಪರವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೇ ಪ್ರಥಮ ಬಾರಿಗೆ ಕಾಶ್ಮೀರದಲ್ಲಿ ಮಹಿಳಾ ಸಂಘಟನೆಯೊಂದು ಐಸಿಸ್ ನಂತರ ಭಯೋತ್ಪಾದಕ ಸಂಘಟನೆಯೊಂದಿಗೆ ಕೈ ಜೋಡಿಸಿರುವ ಕುರಿತು ಮಾಹಿತಿ ಹೊರ ಬಿದ್ದಿದೆ.

ಅನಂತನಾಗ ಜಿಲ್ಲೆಯಲ್ಲಿ ಭಯೋತ್ಪಾದಕನೊಬ್ಬರ ಸೈನಿಕರ ಗುಂಡಿಗೆ ಸತ್ತು ಬಿದ್ದಾಗ ಆತನ ಕುಟುಂಬಕ್ಕೆ ದೌಲತ್ ಉಲ್ ಇಸ್ಲಾಂ ಸಂಘಟನೆಯು ಮುಖ್ಯಸ್ಥರು ಭೇಟಿ ನೀಡಿದ್ದರು. ಅಲ್ಲದೇ ಅವರಿಗೆ ಜಿಹಾದ್  ನ ಬಗ್ಗೆ ಜಾಗೃತಿ ಮೂಡಿಸುವ ನೆಪದಲ್ಲಿ ವಿಷ ಬೀಜ ಬಿತ್ತಿದ್ದರು. ಇದೇ ಘಟನೆಯಿಂದ ಆರಂಭವಾದ ಚಟುವಟಿಕೆಗಳು ಗೌಪ್ಯವಾಗಿ ಮತ್ತು ಬಹಿರಂಗವಾಗಿಯೇ ಮುಂದುವರಿಯುತ್ತಿವೆ ಎಂದು  ಗೃಹ ಇಲಾಖೆ ತಿಳಿಸಿದೆ.

ಕಾಶ್ಮೀರದಲ್ಲಿ ಐಸಿಸ್ ಪರ ಒಲವು ಹೆಚ್ಚುತ್ತಿದ್ದು, ಇತ್ತೀಚೆಗೆ ಅನಂತನಾಗದ ಹಕ್ಕೋರಾ ಮತ್ತು ಶ್ರೀನಗರದ ಬಲ್ಹಾನ್ ನಲ್ಲಿ ಎನ್ ಕೌಂಟರ್ ವೇಳೆ ನಡೆದ ಘಟನೆಗಳೇ ಅನುಮಾನಕ್ಕೆ ಪುಷ್ಠಿ ನೀಡಿವೆ. ಹಕ್ಕೋರಾದಲ್ಲಿ ಕೊಲೆಯಾದ ಮೂವರು ಭಯೋತ್ಪಾದಕರು ಐಸಿಸ್ ನವರು ಎಂಬ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆ ಕಲೆ ಹಾಕಿದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search