• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕ್ರಿಯಾಶೀಲವಾದ ಐಸಿಸ್: ಮಹಿಳಾ ಸಂಘಟನೆಯ ಸಾಥ್

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಕಲ್ಲು ತೂರಾಟ, ಬಂದ್ ಸೇರಿ ದೇಶವಿದ್ರೋಹಿ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಲಗಾಮು ಹಾಕಿರುವ ಸುದ್ದಿ ಬಂದಿರುವಾಗಲೇ ಆಘಾತಕಾರಿ ಅಂಶವೊಂದನ್ನು ಕೇಂದ್ರ ಗೃಹ ಇಲಾಖೆ ಹೊರ ಹಾಕಿದೆ. ಕಾಶ್ಮೀರ ಕಣಿವೆಯಲ್ಲಿ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಐಸಿಸ್ ಭಯೋತ್ಪಾದಕ ಸಂಘಟನೆಯು ಕ್ರಿಯಾಶೀಲವಾಗಿದ್ದು, ಅದಕ್ಕೆ ಮಹಿಳಾ ಸಂಘಟನೆಯೊಂದು ಸಾಥ್ ನೀಡುತ್ತಿದೆ. ಇತ್ತೀಚೆಗೆ ಕೆಲವು ಕಡೆ ಐಸಿಸ್ ಪರ ಒಲವು ಹೊಂದುವಂತ, ಪ್ರಚೋಧನಕಾರಿ ಹೇಳಿಕೆಯುಳ್ಳ ಭಾಷಣಗಳನ್ನು ಮಾಡಲಾಗಿದೆ. ಈ ಕುರಿತು ಕಾಶ್ಮೀರ ಪೊಲೀಸರು ಎಚ್ಚರದಿಂದ ಇರಬೇಕು ಎಂದು ಕೇಂದ್ರ ಗೃಹ ಇಲಾಖೆ ಎಚ್ಚರಿಕೆ ನೀಡಿದೆ.

ಐಸಿಸ್ ಸಂಘಟನೆಯ ಮಹಿಳಾ ಸಂಸ್ಥೆ ದೌಲತ್ ಉಲ್ ಇಸ್ಲಾಂ ಸಂಘಟನೆಯೂ ಕಾಶ್ಮೀರದಲ್ಲಿ ಐಸಿಸ್ ಪರವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದೇ ಪ್ರಥಮ ಬಾರಿಗೆ ಕಾಶ್ಮೀರದಲ್ಲಿ ಮಹಿಳಾ ಸಂಘಟನೆಯೊಂದು ಐಸಿಸ್ ನಂತರ ಭಯೋತ್ಪಾದಕ ಸಂಘಟನೆಯೊಂದಿಗೆ ಕೈ ಜೋಡಿಸಿರುವ ಕುರಿತು ಮಾಹಿತಿ ಹೊರ ಬಿದ್ದಿದೆ.

ಅನಂತನಾಗ ಜಿಲ್ಲೆಯಲ್ಲಿ ಭಯೋತ್ಪಾದಕನೊಬ್ಬರ ಸೈನಿಕರ ಗುಂಡಿಗೆ ಸತ್ತು ಬಿದ್ದಾಗ ಆತನ ಕುಟುಂಬಕ್ಕೆ ದೌಲತ್ ಉಲ್ ಇಸ್ಲಾಂ ಸಂಘಟನೆಯು ಮುಖ್ಯಸ್ಥರು ಭೇಟಿ ನೀಡಿದ್ದರು. ಅಲ್ಲದೇ ಅವರಿಗೆ ಜಿಹಾದ್  ನ ಬಗ್ಗೆ ಜಾಗೃತಿ ಮೂಡಿಸುವ ನೆಪದಲ್ಲಿ ವಿಷ ಬೀಜ ಬಿತ್ತಿದ್ದರು. ಇದೇ ಘಟನೆಯಿಂದ ಆರಂಭವಾದ ಚಟುವಟಿಕೆಗಳು ಗೌಪ್ಯವಾಗಿ ಮತ್ತು ಬಹಿರಂಗವಾಗಿಯೇ ಮುಂದುವರಿಯುತ್ತಿವೆ ಎಂದು  ಗೃಹ ಇಲಾಖೆ ತಿಳಿಸಿದೆ.

ಕಾಶ್ಮೀರದಲ್ಲಿ ಐಸಿಸ್ ಪರ ಒಲವು ಹೆಚ್ಚುತ್ತಿದ್ದು, ಇತ್ತೀಚೆಗೆ ಅನಂತನಾಗದ ಹಕ್ಕೋರಾ ಮತ್ತು ಶ್ರೀನಗರದ ಬಲ್ಹಾನ್ ನಲ್ಲಿ ಎನ್ ಕೌಂಟರ್ ವೇಳೆ ನಡೆದ ಘಟನೆಗಳೇ ಅನುಮಾನಕ್ಕೆ ಪುಷ್ಠಿ ನೀಡಿವೆ. ಹಕ್ಕೋರಾದಲ್ಲಿ ಕೊಲೆಯಾದ ಮೂವರು ಭಯೋತ್ಪಾದಕರು ಐಸಿಸ್ ನವರು ಎಂಬ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆ ಕಲೆ ಹಾಕಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search