• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷರ ನಾಡಿಗೆ ಹೊರಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾದಿದೆ ಅಭೂತಪೂರ್ವ ಸ್ವಾಗತ

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ವೀಸಾ ನೀಡುವುದಿಲ್ಲ ಎಂದಿದ್ದ ಅಮೆರಿಕ ವೀಸಾ ನೀಡುವ ಜತೆಗೆ ಕೆಂಪು ಹಾಸು ಹಾಸಿ ಸ್ವಾಗತ ನೀಡಿತು. ಈ ನಾಲ್ಕು ವರ್ಷಗಳಲ್ಲಿ ಮೋದಿ ಯಾವ ದೇಶಕ್ಕೆ ಹೋದರೂ ಅಲ್ಲಿನ ಸರ್ಕಾರ ಅದ್ಧೂರಿಯಾಗಿ ಸ್ವಾಗತಿಸುತ್ತಿವೆ. ಅಷ್ಟರಮಟ್ಟಿಗೆ ಮೋದಿ ಅವರು ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು ಆಳಿದ ಬ್ರಿಟಿಷರ ನಾಡಿಗೆ ಹೊರಟಿದ್ದು, ಆ ದೇಶ ಭಾರತದ ಪ್ರಧಾನಿಯನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದೆ.

ಹೌದು, ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಭೇಟಿಗಾಗಿ ಮಂಗಳವಾರ ರಾತ್ರಿ ಬ್ರಿಟನ್ ತಲುಪಲಿದ್ದು, ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಬ್ರಿಟನ್ ನಿರ್ಧರಿಸಿದೆ. ಈ ಕುರಿತು ಮೋದಿ ಅವರನ್ನು ಸ್ವಾಗತಿಸಲು ನೇಮಿಸಿದ ಸಿದ್ಧತಾ ತಂಡದ ಅಧಿಕಾರಿಗಳು ಮಾತನಾಡಿದ್ದು, “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ಬ್ರಿಟನ್ ಬದ್ಧವಾಗಿದ್ದು, ಈ ದಿಸೆಯಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿ ಅವರು ಬ್ರಿಟನ್ ಭೇಟಿ ವೇಳೆ ಪ್ರಧಾನಿ ಥೆರೇಸಾ ಮೇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಮೋದಿ ಅವರಿಗಾಗಿ ಬ್ರಿಟನ್ ರಾಜ ಚಾರ್ಲ್ಸ್ ಸಮಾರಂಭವೊಂದನ್ನು ಏರ್ಪಡಿಸಿದ್ದು, ಭಾರತದ ಹೆಮ್ಮೆಯ ಪ್ರಧಾನಿ ಬ್ರಿಟಿಷ್ ರಾಜರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಲಂಡನ್ ನ ಸೈನ್ಸ್ ಮ್ಯೂಸಿಯಂನಲ್ಲಿ ನಡೆಯುವ “5000 ಇಯರ್ಸ್ ಆಫ್ ಸೈನ್ಸ್ ಆ್ಯಂಡ್ ಇನೋವೇಷನ್” ಕಾರ್ಯಕ್ರಮದ ಅಧ್ಯಕ್ಷತೆಯನ್ನೂ ನರೇಂದ್ರ ಮೋದಿ ಅವರೇ ವಹಿಸಿಕೊಳ್ಳಲಿದ್ದಾರೆ. ಭೇಟಿ ವೇಳೆ ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಕ್ಕೆ ಸಹಿ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಭಾರತದ ಪ್ರಧಾನಿಯೊಬ್ಬರು ವಿದೇಶ ಪ್ರವಾಸಕ್ಕಾಗಿ ವಿಮಾನ ಹತ್ತಲು ಸಿದ್ಧರಾದರೆ ಇಡೀ ವಿಶ್ವವೇ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧರಾಗುತ್ತಿರುವುದು ಪ್ರತೀ ಭಾರತೀಯನೂ ಹೆಮ್ಮೆಪಡುವ ಸಂಗತಿಯಾಗಿದೆ. ಇದರ ಎಲ್ಲ ಕ್ರೆಡಿಟ್ಟೂ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಸಲ್ಲಬೇಕು.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search