• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷರ ನಾಡಿಗೆ ಹೊರಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾದಿದೆ ಅಭೂತಪೂರ್ವ ಸ್ವಾಗತ

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ವೀಸಾ ನೀಡುವುದಿಲ್ಲ ಎಂದಿದ್ದ ಅಮೆರಿಕ ವೀಸಾ ನೀಡುವ ಜತೆಗೆ ಕೆಂಪು ಹಾಸು ಹಾಸಿ ಸ್ವಾಗತ ನೀಡಿತು. ಈ ನಾಲ್ಕು ವರ್ಷಗಳಲ್ಲಿ ಮೋದಿ ಯಾವ ದೇಶಕ್ಕೆ ಹೋದರೂ ಅಲ್ಲಿನ ಸರ್ಕಾರ ಅದ್ಧೂರಿಯಾಗಿ ಸ್ವಾಗತಿಸುತ್ತಿವೆ. ಅಷ್ಟರಮಟ್ಟಿಗೆ ಮೋದಿ ಅವರು ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು ಆಳಿದ ಬ್ರಿಟಿಷರ ನಾಡಿಗೆ ಹೊರಟಿದ್ದು, ಆ ದೇಶ ಭಾರತದ ಪ್ರಧಾನಿಯನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದೆ.

ಹೌದು, ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಭೇಟಿಗಾಗಿ ಮಂಗಳವಾರ ರಾತ್ರಿ ಬ್ರಿಟನ್ ತಲುಪಲಿದ್ದು, ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಬ್ರಿಟನ್ ನಿರ್ಧರಿಸಿದೆ. ಈ ಕುರಿತು ಮೋದಿ ಅವರನ್ನು ಸ್ವಾಗತಿಸಲು ನೇಮಿಸಿದ ಸಿದ್ಧತಾ ತಂಡದ ಅಧಿಕಾರಿಗಳು ಮಾತನಾಡಿದ್ದು, “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ಬ್ರಿಟನ್ ಬದ್ಧವಾಗಿದ್ದು, ಈ ದಿಸೆಯಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿ ಅವರು ಬ್ರಿಟನ್ ಭೇಟಿ ವೇಳೆ ಪ್ರಧಾನಿ ಥೆರೇಸಾ ಮೇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಮೋದಿ ಅವರಿಗಾಗಿ ಬ್ರಿಟನ್ ರಾಜ ಚಾರ್ಲ್ಸ್ ಸಮಾರಂಭವೊಂದನ್ನು ಏರ್ಪಡಿಸಿದ್ದು, ಭಾರತದ ಹೆಮ್ಮೆಯ ಪ್ರಧಾನಿ ಬ್ರಿಟಿಷ್ ರಾಜರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಲಂಡನ್ ನ ಸೈನ್ಸ್ ಮ್ಯೂಸಿಯಂನಲ್ಲಿ ನಡೆಯುವ “5000 ಇಯರ್ಸ್ ಆಫ್ ಸೈನ್ಸ್ ಆ್ಯಂಡ್ ಇನೋವೇಷನ್” ಕಾರ್ಯಕ್ರಮದ ಅಧ್ಯಕ್ಷತೆಯನ್ನೂ ನರೇಂದ್ರ ಮೋದಿ ಅವರೇ ವಹಿಸಿಕೊಳ್ಳಲಿದ್ದಾರೆ. ಭೇಟಿ ವೇಳೆ ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಕ್ಕೆ ಸಹಿ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಭಾರತದ ಪ್ರಧಾನಿಯೊಬ್ಬರು ವಿದೇಶ ಪ್ರವಾಸಕ್ಕಾಗಿ ವಿಮಾನ ಹತ್ತಲು ಸಿದ್ಧರಾದರೆ ಇಡೀ ವಿಶ್ವವೇ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧರಾಗುತ್ತಿರುವುದು ಪ್ರತೀ ಭಾರತೀಯನೂ ಹೆಮ್ಮೆಪಡುವ ಸಂಗತಿಯಾಗಿದೆ. ಇದರ ಎಲ್ಲ ಕ್ರೆಡಿಟ್ಟೂ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಸಲ್ಲಬೇಕು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search