• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಿಟಿಷರ ನಾಡಿಗೆ ಹೊರಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾದಿದೆ ಅಭೂತಪೂರ್ವ ಸ್ವಾಗತ

TNN Correspondent Posted On April 16, 2018


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ವೀಸಾ ನೀಡುವುದಿಲ್ಲ ಎಂದಿದ್ದ ಅಮೆರಿಕ ವೀಸಾ ನೀಡುವ ಜತೆಗೆ ಕೆಂಪು ಹಾಸು ಹಾಸಿ ಸ್ವಾಗತ ನೀಡಿತು. ಈ ನಾಲ್ಕು ವರ್ಷಗಳಲ್ಲಿ ಮೋದಿ ಯಾವ ದೇಶಕ್ಕೆ ಹೋದರೂ ಅಲ್ಲಿನ ಸರ್ಕಾರ ಅದ್ಧೂರಿಯಾಗಿ ಸ್ವಾಗತಿಸುತ್ತಿವೆ. ಅಷ್ಟರಮಟ್ಟಿಗೆ ಮೋದಿ ಅವರು ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು ಆಳಿದ ಬ್ರಿಟಿಷರ ನಾಡಿಗೆ ಹೊರಟಿದ್ದು, ಆ ದೇಶ ಭಾರತದ ಪ್ರಧಾನಿಯನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದೆ.

ಹೌದು, ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಭೇಟಿಗಾಗಿ ಮಂಗಳವಾರ ರಾತ್ರಿ ಬ್ರಿಟನ್ ತಲುಪಲಿದ್ದು, ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲು ಬ್ರಿಟನ್ ನಿರ್ಧರಿಸಿದೆ. ಈ ಕುರಿತು ಮೋದಿ ಅವರನ್ನು ಸ್ವಾಗತಿಸಲು ನೇಮಿಸಿದ ಸಿದ್ಧತಾ ತಂಡದ ಅಧಿಕಾರಿಗಳು ಮಾತನಾಡಿದ್ದು, “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ಬ್ರಿಟನ್ ಬದ್ಧವಾಗಿದ್ದು, ಈ ದಿಸೆಯಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿ ಅವರು ಬ್ರಿಟನ್ ಭೇಟಿ ವೇಳೆ ಪ್ರಧಾನಿ ಥೆರೇಸಾ ಮೇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಮೋದಿ ಅವರಿಗಾಗಿ ಬ್ರಿಟನ್ ರಾಜ ಚಾರ್ಲ್ಸ್ ಸಮಾರಂಭವೊಂದನ್ನು ಏರ್ಪಡಿಸಿದ್ದು, ಭಾರತದ ಹೆಮ್ಮೆಯ ಪ್ರಧಾನಿ ಬ್ರಿಟಿಷ್ ರಾಜರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಲಂಡನ್ ನ ಸೈನ್ಸ್ ಮ್ಯೂಸಿಯಂನಲ್ಲಿ ನಡೆಯುವ “5000 ಇಯರ್ಸ್ ಆಫ್ ಸೈನ್ಸ್ ಆ್ಯಂಡ್ ಇನೋವೇಷನ್” ಕಾರ್ಯಕ್ರಮದ ಅಧ್ಯಕ್ಷತೆಯನ್ನೂ ನರೇಂದ್ರ ಮೋದಿ ಅವರೇ ವಹಿಸಿಕೊಳ್ಳಲಿದ್ದಾರೆ. ಭೇಟಿ ವೇಳೆ ಉಭಯ ರಾಷ್ಟ್ರಗಳ ನಡುವೆ ಮಹತ್ತರ ಒಪ್ಪಂದಕ್ಕೆ ಸಹಿ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಭಾರತದ ಪ್ರಧಾನಿಯೊಬ್ಬರು ವಿದೇಶ ಪ್ರವಾಸಕ್ಕಾಗಿ ವಿಮಾನ ಹತ್ತಲು ಸಿದ್ಧರಾದರೆ ಇಡೀ ವಿಶ್ವವೇ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧರಾಗುತ್ತಿರುವುದು ಪ್ರತೀ ಭಾರತೀಯನೂ ಹೆಮ್ಮೆಪಡುವ ಸಂಗತಿಯಾಗಿದೆ. ಇದರ ಎಲ್ಲ ಕ್ರೆಡಿಟ್ಟೂ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಸಲ್ಲಬೇಕು.

  • Share On Facebook
  • Tweet It


- Advertisement -


Trending Now
ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
Tulunadu News October 2, 2023
ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
Tulunadu News October 2, 2023
Leave A Reply

  • Recent Posts

    • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
  • Popular Posts

    • 1
      ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ. ಅದರ ಮುಂದುವರಿದ ಭಾಗವೇ ಈ ದಾಳಿಗಳು:ಶಾಸಕ ಕಾಮತ್
    • 2
      ದಾವೂದ್ ಹತ್ಯೆಗೆ ಅಜಿತ್ ದೋವಲ್ ಮಾಡಿದ ಪ್ಲಾನ್ ವಿಫಲಗೊಳಿಸಿದ್ದು ಯಾರು?
    • 3
      ಶಿವಮೊಗ್ಗದಲ್ಲಿ ಬಹಿರಂಗ ತಲ್ವಾರ್ ಪ್ರದರ್ಶನ, ಭಯ ಉತ್ಪಾದಕ ಕೃತ್ಯ!
    • 4
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 5
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search