• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆ ಪಠ್ಯದಲ್ಲಿ ಸೇರಿದವು ಭಗವದ್ಗೀತೆಯ ಅಧ್ಯಾಯಗಳು!

TNN Correspondent Posted On April 16, 2018


  • Share On Facebook
  • Tweet It

ಜೈಪುರ: ಪ್ರತೀ ಭಾರತೀಯನೂ ಓದಬೇಕಾದ ಪುಸ್ತಕ ಹಾಗೂ ಧರ್ಮಗ್ರಂಥ ಎಂದರೆ ಅದು ಭಗವದ್ಗೀತೆ. ಆದರೆ ಆಧುನಿಕ ಪಠ್ಯಕ್ರಮ, ಸ್ಪರ್ಧಾತ್ಮಕ ಜಗತ್ತು, ಮಕ್ಕಳ ಮನಸ್ಥಿತಿ ಬದಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಭಗವದ್ಗೀತೆ ಓದುವುದಿಲ್ಲ. ಅದರ ಸಂದೇಶ ಅರಿಯುವುದಿಲ್ಲ.

ಆದರೆ ಇದನ್ನು ಮನಗಂಡಿರುವ ರಾಜಸ್ಥಾನ ಸರ್ಕಾರ ಈಗ ತಾನು ನಡೆಸುವ ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆಯಾದ ರಾಜಸ್ಥಾನ ಲೋಕಸೇವಾ ಆಯೋಗದ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿದೆ.

ಹಾಗಂತ ಸುಖಾಸುಮ್ಮನೆ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿಲ್ಲ. ಭಗವದ್ಗೀತೆಯಲ್ಲಿ ಆಡಳಿತ ಮತ್ತು ನಿರ್ವಹಣೆ ಕುರಿತು ಇರುವ ಅಂಶಗಳನ್ನು ಗುರುತಿಸಿ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಂದೆ ಅಧಿಕಾರಿಯಾದ ಬಳಿಕ ನಿರ್ವಹಣೆ ಹಾಗೂ ಆಡಳಿತದಲ್ಲಿ ದಕ್ಷತೆ ಕಾಪಾಡಿಕೊಳ್ಳಲಿ, ಭಗವದ್ಗೀತೆಯ ಸಾತ್ವಿಕ ವಿಚಾರಗಳನ್ನು ಅಭ್ಯರ್ಥಿಗಳನ್ನು ಅವುಗಳನ್ನು ಅಳವಡಿಸಿಕೊಂಡು ಯಶಸ್ವಿ ಅಧಿಕಾರಿಯಾಗಲಿ ಎಂಬ ದೃಷ್ಟಿಯಿಂದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಪಠ್ಯಕ್ರಮದ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಒಂದು ಘಟಕ ಸೇರಿಸಿದ್ದು, ಅದರಲ್ಲಿ ನಿರ್ವಹಣೆ ಮತ್ತು ಆಡಳಿತದಲ್ಲಿ ಭಗವದ್ಗೀತೆಯ ಪಾತ್ರ ಎಂಬ ಉಪ ಘಟಕವನ್ನು ಸೇರಿಸಲಾಗಿದೆ. ಅಷ್ಟೇ ಅಲ್ಲ, ಕುರುಕ್ಷೇತ್ರದಲ್ಲಿ ಯುದ್ಧ ಆರಂಭವಾಗುವ ಮುನ್ನ ಕೃಷ್ಣ ಮತ್ತು ಅರ್ಜುನನ ನಡುವೆ ನಡೆಯುವ ಕುರಿತು 18 ಅಧ್ಯಾಯಗಳನ್ನು ಸೇರಿಸಲಾಗಿದೆ.

ಒಟ್ಟಿನಲ್ಲಿ ಇಷ್ಟು ದಿನ ಭಗವದ್ಗೀತೆ ಎಂದರೆ ಅಷ್ಟು ದೊಡ್ಡ ಪುಸ್ತಕವನ್ನು ಯಾರು ಓದುತ್ತಾರೆ ಎಂಬ ನಿರ್ಲಕ್ಷ್ಯ ಮನೋಭಾವನೆ ತೊಲಗಿಸಲು ರಾಜಸ್ಥಾನ ಸರ್ಕಾರ ಆಡಳಿತ ಸೇವೆ ಪಠ್ಯದಲ್ಲಿ ಭಗವದ್ಗೀತೆ ಅಧ್ಯಾಯ ಸೇರಿಸಿದ್ದು, ಇದು ದಕ್ಷ ಅಧಿಕಾರಿಯಾಗಲು ಸಹಕರಿಸುವ ಜತೆಗೆ ಜೀವನದಲ್ಲಿ ಉತ್ತಮ ಮೌಲ್ಯ ಕಟ್ಟಿಕೊಡುವುದರಲ್ಲಿ ಎರಡು ಮಾತಿಲ್ಲ.

  • Share On Facebook
  • Tweet It


- Advertisement -


Trending Now
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
Tulunadu News September 27, 2023
Leave A Reply

  • Recent Posts

    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
  • Popular Posts

    • 1
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 2
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 3
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 4
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 5
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search