• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆ ಪಠ್ಯದಲ್ಲಿ ಸೇರಿದವು ಭಗವದ್ಗೀತೆಯ ಅಧ್ಯಾಯಗಳು!

TNN Correspondent Posted On April 16, 2018
0


0
Shares
  • Share On Facebook
  • Tweet It

ಜೈಪುರ: ಪ್ರತೀ ಭಾರತೀಯನೂ ಓದಬೇಕಾದ ಪುಸ್ತಕ ಹಾಗೂ ಧರ್ಮಗ್ರಂಥ ಎಂದರೆ ಅದು ಭಗವದ್ಗೀತೆ. ಆದರೆ ಆಧುನಿಕ ಪಠ್ಯಕ್ರಮ, ಸ್ಪರ್ಧಾತ್ಮಕ ಜಗತ್ತು, ಮಕ್ಕಳ ಮನಸ್ಥಿತಿ ಬದಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಭಗವದ್ಗೀತೆ ಓದುವುದಿಲ್ಲ. ಅದರ ಸಂದೇಶ ಅರಿಯುವುದಿಲ್ಲ.

ಆದರೆ ಇದನ್ನು ಮನಗಂಡಿರುವ ರಾಜಸ್ಥಾನ ಸರ್ಕಾರ ಈಗ ತಾನು ನಡೆಸುವ ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆಯಾದ ರಾಜಸ್ಥಾನ ಲೋಕಸೇವಾ ಆಯೋಗದ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿದೆ.

ಹಾಗಂತ ಸುಖಾಸುಮ್ಮನೆ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿಲ್ಲ. ಭಗವದ್ಗೀತೆಯಲ್ಲಿ ಆಡಳಿತ ಮತ್ತು ನಿರ್ವಹಣೆ ಕುರಿತು ಇರುವ ಅಂಶಗಳನ್ನು ಗುರುತಿಸಿ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಂದೆ ಅಧಿಕಾರಿಯಾದ ಬಳಿಕ ನಿರ್ವಹಣೆ ಹಾಗೂ ಆಡಳಿತದಲ್ಲಿ ದಕ್ಷತೆ ಕಾಪಾಡಿಕೊಳ್ಳಲಿ, ಭಗವದ್ಗೀತೆಯ ಸಾತ್ವಿಕ ವಿಚಾರಗಳನ್ನು ಅಭ್ಯರ್ಥಿಗಳನ್ನು ಅವುಗಳನ್ನು ಅಳವಡಿಸಿಕೊಂಡು ಯಶಸ್ವಿ ಅಧಿಕಾರಿಯಾಗಲಿ ಎಂಬ ದೃಷ್ಟಿಯಿಂದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಪಠ್ಯಕ್ರಮದ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಒಂದು ಘಟಕ ಸೇರಿಸಿದ್ದು, ಅದರಲ್ಲಿ ನಿರ್ವಹಣೆ ಮತ್ತು ಆಡಳಿತದಲ್ಲಿ ಭಗವದ್ಗೀತೆಯ ಪಾತ್ರ ಎಂಬ ಉಪ ಘಟಕವನ್ನು ಸೇರಿಸಲಾಗಿದೆ. ಅಷ್ಟೇ ಅಲ್ಲ, ಕುರುಕ್ಷೇತ್ರದಲ್ಲಿ ಯುದ್ಧ ಆರಂಭವಾಗುವ ಮುನ್ನ ಕೃಷ್ಣ ಮತ್ತು ಅರ್ಜುನನ ನಡುವೆ ನಡೆಯುವ ಕುರಿತು 18 ಅಧ್ಯಾಯಗಳನ್ನು ಸೇರಿಸಲಾಗಿದೆ.

ಒಟ್ಟಿನಲ್ಲಿ ಇಷ್ಟು ದಿನ ಭಗವದ್ಗೀತೆ ಎಂದರೆ ಅಷ್ಟು ದೊಡ್ಡ ಪುಸ್ತಕವನ್ನು ಯಾರು ಓದುತ್ತಾರೆ ಎಂಬ ನಿರ್ಲಕ್ಷ್ಯ ಮನೋಭಾವನೆ ತೊಲಗಿಸಲು ರಾಜಸ್ಥಾನ ಸರ್ಕಾರ ಆಡಳಿತ ಸೇವೆ ಪಠ್ಯದಲ್ಲಿ ಭಗವದ್ಗೀತೆ ಅಧ್ಯಾಯ ಸೇರಿಸಿದ್ದು, ಇದು ದಕ್ಷ ಅಧಿಕಾರಿಯಾಗಲು ಸಹಕರಿಸುವ ಜತೆಗೆ ಜೀವನದಲ್ಲಿ ಉತ್ತಮ ಮೌಲ್ಯ ಕಟ್ಟಿಕೊಡುವುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
  • Popular Posts

    • 1
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 2
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search