• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆ ಪಠ್ಯದಲ್ಲಿ ಸೇರಿದವು ಭಗವದ್ಗೀತೆಯ ಅಧ್ಯಾಯಗಳು!

TNN Correspondent Posted On April 16, 2018
0


0
Shares
  • Share On Facebook
  • Tweet It

ಜೈಪುರ: ಪ್ರತೀ ಭಾರತೀಯನೂ ಓದಬೇಕಾದ ಪುಸ್ತಕ ಹಾಗೂ ಧರ್ಮಗ್ರಂಥ ಎಂದರೆ ಅದು ಭಗವದ್ಗೀತೆ. ಆದರೆ ಆಧುನಿಕ ಪಠ್ಯಕ್ರಮ, ಸ್ಪರ್ಧಾತ್ಮಕ ಜಗತ್ತು, ಮಕ್ಕಳ ಮನಸ್ಥಿತಿ ಬದಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಭಗವದ್ಗೀತೆ ಓದುವುದಿಲ್ಲ. ಅದರ ಸಂದೇಶ ಅರಿಯುವುದಿಲ್ಲ.

ಆದರೆ ಇದನ್ನು ಮನಗಂಡಿರುವ ರಾಜಸ್ಥಾನ ಸರ್ಕಾರ ಈಗ ತಾನು ನಡೆಸುವ ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆಯಾದ ರಾಜಸ್ಥಾನ ಲೋಕಸೇವಾ ಆಯೋಗದ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿದೆ.

ಹಾಗಂತ ಸುಖಾಸುಮ್ಮನೆ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿಲ್ಲ. ಭಗವದ್ಗೀತೆಯಲ್ಲಿ ಆಡಳಿತ ಮತ್ತು ನಿರ್ವಹಣೆ ಕುರಿತು ಇರುವ ಅಂಶಗಳನ್ನು ಗುರುತಿಸಿ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಂದೆ ಅಧಿಕಾರಿಯಾದ ಬಳಿಕ ನಿರ್ವಹಣೆ ಹಾಗೂ ಆಡಳಿತದಲ್ಲಿ ದಕ್ಷತೆ ಕಾಪಾಡಿಕೊಳ್ಳಲಿ, ಭಗವದ್ಗೀತೆಯ ಸಾತ್ವಿಕ ವಿಚಾರಗಳನ್ನು ಅಭ್ಯರ್ಥಿಗಳನ್ನು ಅವುಗಳನ್ನು ಅಳವಡಿಸಿಕೊಂಡು ಯಶಸ್ವಿ ಅಧಿಕಾರಿಯಾಗಲಿ ಎಂಬ ದೃಷ್ಟಿಯಿಂದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಪಠ್ಯಕ್ರಮದ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಒಂದು ಘಟಕ ಸೇರಿಸಿದ್ದು, ಅದರಲ್ಲಿ ನಿರ್ವಹಣೆ ಮತ್ತು ಆಡಳಿತದಲ್ಲಿ ಭಗವದ್ಗೀತೆಯ ಪಾತ್ರ ಎಂಬ ಉಪ ಘಟಕವನ್ನು ಸೇರಿಸಲಾಗಿದೆ. ಅಷ್ಟೇ ಅಲ್ಲ, ಕುರುಕ್ಷೇತ್ರದಲ್ಲಿ ಯುದ್ಧ ಆರಂಭವಾಗುವ ಮುನ್ನ ಕೃಷ್ಣ ಮತ್ತು ಅರ್ಜುನನ ನಡುವೆ ನಡೆಯುವ ಕುರಿತು 18 ಅಧ್ಯಾಯಗಳನ್ನು ಸೇರಿಸಲಾಗಿದೆ.

ಒಟ್ಟಿನಲ್ಲಿ ಇಷ್ಟು ದಿನ ಭಗವದ್ಗೀತೆ ಎಂದರೆ ಅಷ್ಟು ದೊಡ್ಡ ಪುಸ್ತಕವನ್ನು ಯಾರು ಓದುತ್ತಾರೆ ಎಂಬ ನಿರ್ಲಕ್ಷ್ಯ ಮನೋಭಾವನೆ ತೊಲಗಿಸಲು ರಾಜಸ್ಥಾನ ಸರ್ಕಾರ ಆಡಳಿತ ಸೇವೆ ಪಠ್ಯದಲ್ಲಿ ಭಗವದ್ಗೀತೆ ಅಧ್ಯಾಯ ಸೇರಿಸಿದ್ದು, ಇದು ದಕ್ಷ ಅಧಿಕಾರಿಯಾಗಲು ಸಹಕರಿಸುವ ಜತೆಗೆ ಜೀವನದಲ್ಲಿ ಉತ್ತಮ ಮೌಲ್ಯ ಕಟ್ಟಿಕೊಡುವುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search