• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಧ್ವಜ ಹೊತ್ತು ಲಕ್ಷಾಂತರ ಕಿ.ಮೀ. ನಡೆಯುತ್ತಿರುವ ಈ ವ್ಯಕ್ತಿಯ ಆಶಯವೇನು ಗೊತ್ತಾ?

TNN Correspondent Posted On April 16, 2018
0


0
Shares
  • Share On Facebook
  • Tweet It

ಭಾರತ, ಭಾರತದ ಧ್ವಜ, ಭಾರತದ ಗೀತೆ ಎಂದರೆ ಪ್ರತಿ ದೇಶಭಕ್ತ ಭಾರತೀಯನ ರೋಮವೂ ಎದ್ದುನಿಲ್ಲುತ್ತದೆ ಎಂಬುದಕ್ಕೆ ನಿದರ್ಶನವೊಂದು ಸಿಕ್ಕಿದ್ದು, ಹರಿಯಾಣದ ವ್ಯಕ್ತಿಯೊಬ್ಬ ದೇಶದ ಜನರಲ್ಲಿ ಜಾಗೃತಿ ಮೂಡಿಸಲು ಭಾರತದ ಧ್ವಜ ಹೊತ್ತು ದೇಶಾದ್ಯಂತ ಲಕ್ಷಾಂತರ ಕಿ.ಮೀ. ಸಂಚರಿಸಿದ್ದಾನೆ.

ಹೌದು, 83 ವರ್ಷದ ಬಾಗಿಚ ಸಿಂಗ್ ಕಳೆದ 25 ವರ್ಷದಲ್ಲಿ ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 5.70 ಲಕ್ಷ ಕಿ.ಮೀ. ನಡೆದಿದ್ದಾರೆ. ಸುಮ್ಮನೆ ಹೆಸರಿಗಾಗಿ, ಮಾಧ್ಯಮದಲ್ಲಿ ಕಾಣಿಸಿಕೊಳ್ಳಲು ಸಿಂಗ್ ಹೀಗೆ ಮಾಡಿಲ್ಲ.

ಬದಲಾಗಿ ದೇಶಾದ್ಯಂತ ಯುವಕರು ತಂಬಾಕು, ಡ್ರಗ್ಸ್, ಮದ್ಯ ಸೇವನೆಯ ದಾಸರಾಗಿರುವುದನ್ನು ಕಂಡು ಬೇಸರಗೊಂಡ ಈತ 1993ರಿಂದ ಇದುವರೆಗೆ ದೇಶಾದ್ಯಂತ ಕಾಲ್ನಡಿಗೆ ಮೂಲಕ ಸಂಚರಿಸಿ ಜಾಗೃತಿ ಮೂಡಿಸಿದ್ದಾರೆ.

ಅದಕ್ಕಾಗಿ ಇವರು ಬಳಸಿಕೊಂಡಿರುವ ಅಸ್ತ್ರ ದೇಶಪ್ರೇಮ. ಸುಮಾರು 90 ಕೆಜಿ ಭಾರದ, 15 ಅಡಿ ಉದ್ದದ ಕಂಬಗಳಿಗೆ ಭಾರತದ ಧ್ವಜ ಕಟ್ಟಿರುವ ಇವರು ಅದನ್ನು ಹೊತ್ತುಕೊಂಡು ಊರು ಊರು ಸುತ್ತುತ್ತಿದ್ದಾರೆ.

ದೇಶದ ಯುವಜನತೆ ಚಟಗಳ ದಾಸರಾದರೆ ಸದೃಢ ಭಾರತದ ಸೃಷ್ಟಿಯಾಗುವುದು ಹೇಗೆ ಎಂಬ ಪ್ರಶ್ನೆ ಮೂಡಿತು. ಹಾಗಾಗಿ ಇವರೆಲ್ಲರಿಗೂ ಜಾಗೃತಿ ಮೂಡಿಸಲು ನನ್ನ ಇಡೀ ಜೀವನವನ್ನೇ ಮುಡಿಪಾಗಿಟ್ಟು ದೇಶಾದ್ಯಂತ ಸಂಚರಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಯುವಕರು ಚಟಗಳ ದಾಸರಾಗಬಾರದು ಎಂಬುದೇ ನನ್ನ ಆಶಯ ಎನ್ನುತ್ತಾರೆ ಬಾಗಿಚ ಸಿಂಗ್.

ತಲೆ ನೋವು ಬಂದರೆ ನಾಲ್ಕು ದಿನ ರಜೆ ಹಾಕುವ ನಾವು, ಸಿಗರೇಟು, ಹಾಲ್ಕೋಹಾಲ್ ಎಂದು ಆರೋಗ್ಯ ಕೆಡಿಸಿಕೊಳ್ಳುವ ನಾವು, ಅರ್ಧ ಕಿಲೋ ಮೀಟರ್ ದೂರ ಎಂದರೂ ಆಟೋ ಹಿಡಿಯುವ ನಾವು, ನಮಗಾಗಿ ಲಕ್ಷಾಂತರ ಕಿಲೋ ಮೀಟರ್ ಕಾಲ್ನಡಿಗೆಯಲ್ಲೆ ಸಂಚರಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಇವರಿಗೊಂದು ಸಲಾಮ್ ಹೇಳೋಣ, ಅವರ ಆಶಯ ಪಾಲಿಸೋಣ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search