• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಶ್ಚಿಯನ್ನರ ಪವಿತ್ರ ಸ್ಥಳದಲ್ಲಿ ಮೊಳಗಲಿದೆ ಹಿಂದೂ ಸಂತನ ಉಪನ್ಯಾಸ

TNN Correspondent Posted On April 17, 2018
0


0
Shares
  • Share On Facebook
  • Tweet It

ವಿಜಯಪುರ: 1893 ಜುಲೈ 30 ರಂದು ಚಿಕ್ಯಾಗೋದಲ್ಲಿ ಸ್ವಾಮೀ ವಿವೇಕಾನಂದರು ಮೊಳಗಿಸಿದ ಹಿಂದೂ ಧರ್ಮದ ವಿಶ್ವಭಾತೃತ್ವದ ಧ್ವನಿ ಇಂದಿಗೂ ವಿಶ್ವಾದ್ಯಂತ ಅನುರಣಿಸುತ್ತಿದೆ. ಹಿಂದೂತ್ವದ ಧ್ವನಿಗೆ ಕಿವಿಗೊಟ್ಟು ಕೇಳುವವರು ಸದಾ ಇರುತ್ತಾರೆ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದ್ದು, ಅಂದು ಸ್ವಾಮಿ ವಿವೇಕಾನಂದರು ಬಿತ್ತಿದ್ದ ಬೀಜ ಇಂದಿಗೂ ಫಲ ನೀಡುತ್ತಿದೆ. ಅದಕ್ಕೆ ಸಾಕ್ಷಿ ಪ್ರಪ್ರಥಮ ಬಾರಿಗೆ ಕ್ರಿಶ್ಚಿಯನ್ನರ ಪವಿತ್ರ ಸ್ಥಳ ವ್ಯಾಟಿಕನ್ ಚರ್ಚ್ ನಲ್ಲಿ  ನಡೆಯಲಿರುವ ಅಂತರ್ ಧರ್ಮಿಯರ ವಿಶ್ವಸಮ್ಮೇಳನದಲ್ಲಿ ರಾಮಕೃಷ್ಣ ಆಶ್ರಮದ ಸಂತ ಸ್ವಾಮಿ ನಿರ್ಭಯಾನಂದಜೀ ಅವರಿಗೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಪಾಲ್ಗೊಳ್ಳುವ ಅವಕಾಶ ದೊರಕಿದೆ.

ಗದಗ ಮತ್ತು ವಿಜಯಪುರ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿರುವ ಸ್ವಾಮಿ ನಿರ್ಭಯಾನಂದಜೀ ಅವರು ವ್ಯಾಟಿಕನ್ ಚರ್ಚ್ ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸುವ ಪ್ರಥಮ ಭಾರತೀಯ ಸನ್ಯಾಸಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸ್ವಾಮೀಜಿ ‘ದಿ ಧರ್ಮ ಆ್ಯಂಡ್ ದಿ ಲೋಗೋಸ್’ ಎಂಬ ವಿಷಯದ ಕುರಿತು ಅರ್ಧ ಗಂಟೆ ಉಪನ್ಯಾಸ ನೀಡಲಿದ್ದು, ನಂತರ ಒಂದು ಗಂಟೆ ಅದೇ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳನ್ನು ಅರಿತಿರುವ ನಿರ್ಭಯಾನಂದ ಜೀ ಹಿಂದೂ ಧರ್ಮದ ಬಗ್ಗೆ ಅಗಾಧವಾದ ಪಾಂಡಿತ್ಯವನ್ನು ಸಾಧಿಸಿದ್ದಾರೆ. ಅಲ್ಲದೇ ದೇಶ ವಿದೇಶಗಳಲ್ಲಿ ಹಿಂದೂ ಧರ್ಮದ ಕುರಿತು ಜಾಗೃತಿ ಮೂಡಿಸುವ ಉಪನ್ಯಾಸಗಳನ್ನು ನೀಡಿದ್ದಾರೆ. ಹಿಂದೂ ಧರ್ಮದ ಕುರಿತು ಆಳ ಜ್ಞಾನವನ್ನು ಸ್ವಾಮೀಜೀ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search