• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿಯ 56 ಇಂಚಿನ ಎದೆಯನ್ನು ಎದುರಿಸಲು 3 ತಿಂಗಳಲ್ಲೇ ಸಿದ್ದರಾಮಯ್ಯ ಖರ್ಚು ಮಾಡಿದ್ದು 56 ಕೋಟಿ

TNN Correspondent Posted On April 17, 2018


  • Share On Facebook
  • Tweet It

ಬೆಂಗಳೂರು: ಈ ಮೇಲಿನ ಸಂಖ್ಯೆಗಳನ್ನು ನೋಡಿದರೇ ಒಂದು ಕ್ಷಣ ಅವಕ್ಕಾಗಬಹುದು. ಎಲ್ಲಿಯ ಮೋದಿಯ 56 ಇಂಚಿನ ಎದೆ, ಎಲ್ಲಿಯ ಸಿದ್ದರಾಮಯ್ಯ ಸರ್ಕಾರ. ಈ ಸಂಖ್ಯೆಗಳು ಕಾಕತಾಳಿಯ. ಆದರೆ ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಬಿಜೆಪಿಯ ಅಲೆಯನ್ನು ಎದುರಿಸಲು ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಜಾಹಿರಾತು ನೀಡಲು ಕಳೆದ ಮೂರು ತಿಂಗಳಲ್ಲಿ ಖರ್ಚು ಮಾಡಿದ್ದು ಒಟ್ಟು 56 ಕೋಟಿ ರೂಪಾಯಿ. ಸಿದ್ದರಾಮಯ್ಯ ಜನರನ್ನು ಸೆಳೆಯಲು ಕಳೆದ ಮೂರು ತಿಂಗಳಲ್ಲಿ ಜಾಹೀರಾತಿಗಾಗಿ ಖರ್ಚು ಮಾಡಿದ್ದು, 56 ಕೋಟಿ ರೂಪಾಯಿ ಎಂಬ ಮಾಹಿತಿ ಆರ್ ಟಿಐ ನಿಂದ ಬಹಿರಂಗವಾಗಿದೆ.

ಐದು ವರ್ಷದಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆಗಳನ್ನು ಕೇವಲ ಮೂರು ತಿಂಗಳಲ್ಲಿ ಜನರಿಗೆ ತಿಳಿಸಲು ಸಿದ್ದರಾಮಯ್ಯ ಸರ್ಕಾರ ಮಾಡಿರುವ ಖರ್ಚು ಹಲವು ಅನುಮಾನಗಳನ್ನು ಮೂಡಿಸಿದೆ. 56 ಎದೆಯಿಂಚಿನ ನರೇಂದ್ರ ಮೋದಿ ಪ್ರಚಾರಕ್ಕೆ ಬರುವರು ಎಂಬ ಭೀತಿಯಿಂದ ರಾಜ್ಯ ಸರ್ಕಾರ ಈ ಮಟ್ಟಕ್ಕೆ ಹಣ ಖರ್ಚು ಮಾಡಿರಬಹುದಾ ಎಂಬ ಅನುಮಾನ ಮೂಡಿಸಿದೆ.

ಮಾಹಿತಿ ಹಕ್ಕಿನಡಿ ದೊರಕಿರುವ ಉತ್ತರದ ಪ್ರಕಾರ ‘ಕೇವಲ ಇಲಾಖಾವಾರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ, ಮತ ಪಡೆಯುವ ಹುನ್ನಾರ. ಚುನಾವಣೆಯ ಹೊತ್ತಿನಲ್ಲಿ ನಡೆದಿರುವುದು ಸ್ಪಷ್ಟವಾಗಿದೆ. ಮಾಧ್ಯಮಗಳು, ಆಟೋ, ಬಸ್ ಗಳ ಮೇಲೆ ಪೋಸ್ಟರ್, ಎಲ್ ಇಡಿ ಮೊಬೈಲ್ ವ್ಯಾನ್ ಗಳು, ಎಲ್ ಇಡಿ ಹೋಲ್ಡಿಂಗ್ಸ್ ಗಳನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದು, ಜನರ ಹಣವನ್ನು ಬೇಕಾಬಿಟ್ಟಿಯಾಗಿ ಪ್ರಚಾರಕ್ಕೆ ಬಳಸಿರುವುದು ಸ್ಪಷ್ಟವಾಗಿದೆ.

ಸಿದ್ದರಾಮಯ್ಯ ಸಂಪುಟದ ಸಚಿವರಾದ ಎಂಬಿ ಪಾಟೀಲ್ ಮತ್ತು ಕೆ.ಜೆ.ಜಾರ್ಜ್ ಒಂದು ಹೆಜ್ಜೆ ಮುಂದು ಹೋಗಿ ಡಿಜಿಟಲ್ ಪ್ರಚಾರ ಕೈಗೊಂಡರು. ಟಿವಿಗಳಿಗೂ ಜಾಹಿರಾತು ನೀಡಿದ್ದರು. ಇವರು ಪ್ರತ್ಯೇಕವಾಗಿ ಇಲಾಖಾವಾರು ಹಣ ಬಳಸಿಕೊಂಡಿದ್ದಾರೆ.

ಡಿಸೆಂಬರ್ 1ರಿಂದ ಮಾರ್ಚ್ 20ರವರೆಗೆ ಅಂದರೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವವರೆಗೆ ರಾಜ್ಯ ಸರ್ಕಾರ ಒಟ್ಟು 56 ಕೋಟಿ ರೂಪಾಯಿ ಜನರ ತೆರಿಗೆ ಹಣವನ್ನು ತನ್ನ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search