• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಾಹ್ಮಣ ವಿರೋಧಿಗಳೇ ಎಲ್ಲಿದ್ದೀರಿ, ಅರ್ಚಕರೊಬ್ಬರು ದಲಿತ ವ್ಯಕ್ತಿಯನ್ನು ದೇವಾಲಯದೊಳಗೆ ಹೊತ್ತೊಯ್ದಿದ್ದನ್ನು ನೋಡಿರಿ!

TNN Correspondent Posted On April 17, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಎಲ್ಲಾದರೂ ದಲಿತರ ಮೇಲೆ ಹಲ್ಲೆಯಾದರೆ, ಅನ್ಯಾಯವಾದರೆ ತುಂಬ ಜನ ಆರೋಪಿಗಳ ವಿರುದ್ಧ ಮಾತನಾಡದೆ ಬ್ರಾಹ್ಮಣರ ವಿರುದ್ಧ ಮಾತನಾಡುತ್ತಾರೆ. ಪುರೋಹಿತ ಶಾಹಿಯಿಂದಲೇ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಹೈದರಾಬಾದಿನಲ್ಲಿ ಬ್ರಾಹ್ಮಣ ಅರ್ಚಕರೊಬ್ಬರು ದಲಿತ ಭಕ್ತರೊಬ್ಬರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ದೇವಾಲಯ ಪ್ರವೇಶಿಸುವ ಮೂಲಕ ಭಕ್ತಿ, ದೇವರು, ದರ್ಶನ ಎಲ್ಲರಿಗೂ ಒಂದೇ ಎಂಬ ಸೌಹಾರ್ದಯುತ ಸಂದೇಶ ಸಾರುವ ಮೂಲಕ ಬ್ರಾಹ್ಮಣ ವಿರೋಧಿಗಳಿಗೆ ಸರಿಯಾದ ಚಾಟಿಯೇಟು ನೀಡಿದ್ದಾರೆ.

ಹೌದು, ಹೈದರಾಬಾದಿನ ಜಿಯಾಗುಡದ ಶ್ರೀ ರಂಗನಾಥ ದೇವಾಲಯದಲ್ಲಿ ಇಂಥದ್ದೊಂದು ಸೌಹಾರ್ದಯುತ ಸಂದೇಶ ಸಾರುವ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿಲ್ಕೂರ್ ಬಾಲಾಜಿ ದೇವಾಲಯದಲ್ಲಿ ಅರ್ಚಕರಾಗಿರುವ ಸಿ.ಎಸ್.ರಂಗರಾಜನ್ ಅವರು ದಲಿತ ಭಕ್ತ ಆದಿತ್ಯ ಪರಶ್ರೀ ಎಂಬುವವರ ಕೊರಳಿಗೆ ಹಾರ ಹಾಕಿ ದೇವಾಲಯದ ಪ್ರಾಂಗಣ ಪ್ರವೇಶಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅರ್ಚಕ, ದೇಶದಲ್ಲಿ ಕೆಲ ಮೂಲಭೂತವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ಅಸಮಾನತೆ ಇದೆ ಎಂದು ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ಹೀಗೆ ವಿಷಬೀಜ ಬಿತ್ತುವವರಿಗೆ ನಿಜಾಂಶ ತಿಳಿಸಲು ಹಾಗೂ ಅವರು ತಮ್ಮ ಮನಸ್ಸಿನಲ್ಲಿರುವ ಕೊಳಕನ್ನು ತೊಲಗಿಸಲಿ ಎಂದು ದಲಿತ ಭಕ್ತರೊಬ್ಬರನ್ನು ಹೆಗಲ ಮೇಲೆ ಹೊತ್ತು ದೇವಾಲಯ ಪ್ರವೇಶಿಸಿ ಸೌಹಾರ್ದದ ಸಂದೇಶ ಸಾರಿದ್ದೇನೆ, ನಾವೆಲ್ಲರೂ ಒಂದಾಗಿ, ಮನುಷ್ಯರಂತೆ ಬದುಕಬೇಕು ಎಂಬುದೇ ನನ್ನ ಆಶಯ ಎಂದು ಅರ್ಚಕರು ತಿಳಿಸಿದ್ದಾರೆ. ಇನ್ನಾದರೂ ಕುತ್ಸಿತ ಮನಸ್ಸುಗಳು ದೇಶದಲ್ಲಿ ಅಸಮಾನತೆ ಇದೆ ಎಂದು ಬೊಬ್ಬೆ ಹಾಕುವುದನ್ನು ಬಿಟ್ಟು, ಒಂದಾಗಿ ಬಾಳಲು ಸಹಕಾರ ನೀಡಲಿ ಎಂಬುದೇ ನಮ್ಮ ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search