• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಾಹ್ಮಣ ವಿರೋಧಿಗಳೇ ಎಲ್ಲಿದ್ದೀರಿ, ಅರ್ಚಕರೊಬ್ಬರು ದಲಿತ ವ್ಯಕ್ತಿಯನ್ನು ದೇವಾಲಯದೊಳಗೆ ಹೊತ್ತೊಯ್ದಿದ್ದನ್ನು ನೋಡಿರಿ!

TNN Correspondent Posted On April 17, 2018


  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಎಲ್ಲಾದರೂ ದಲಿತರ ಮೇಲೆ ಹಲ್ಲೆಯಾದರೆ, ಅನ್ಯಾಯವಾದರೆ ತುಂಬ ಜನ ಆರೋಪಿಗಳ ವಿರುದ್ಧ ಮಾತನಾಡದೆ ಬ್ರಾಹ್ಮಣರ ವಿರುದ್ಧ ಮಾತನಾಡುತ್ತಾರೆ. ಪುರೋಹಿತ ಶಾಹಿಯಿಂದಲೇ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಹೈದರಾಬಾದಿನಲ್ಲಿ ಬ್ರಾಹ್ಮಣ ಅರ್ಚಕರೊಬ್ಬರು ದಲಿತ ಭಕ್ತರೊಬ್ಬರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ದೇವಾಲಯ ಪ್ರವೇಶಿಸುವ ಮೂಲಕ ಭಕ್ತಿ, ದೇವರು, ದರ್ಶನ ಎಲ್ಲರಿಗೂ ಒಂದೇ ಎಂಬ ಸೌಹಾರ್ದಯುತ ಸಂದೇಶ ಸಾರುವ ಮೂಲಕ ಬ್ರಾಹ್ಮಣ ವಿರೋಧಿಗಳಿಗೆ ಸರಿಯಾದ ಚಾಟಿಯೇಟು ನೀಡಿದ್ದಾರೆ.

ಹೌದು, ಹೈದರಾಬಾದಿನ ಜಿಯಾಗುಡದ ಶ್ರೀ ರಂಗನಾಥ ದೇವಾಲಯದಲ್ಲಿ ಇಂಥದ್ದೊಂದು ಸೌಹಾರ್ದಯುತ ಸಂದೇಶ ಸಾರುವ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿಲ್ಕೂರ್ ಬಾಲಾಜಿ ದೇವಾಲಯದಲ್ಲಿ ಅರ್ಚಕರಾಗಿರುವ ಸಿ.ಎಸ್.ರಂಗರಾಜನ್ ಅವರು ದಲಿತ ಭಕ್ತ ಆದಿತ್ಯ ಪರಶ್ರೀ ಎಂಬುವವರ ಕೊರಳಿಗೆ ಹಾರ ಹಾಕಿ ದೇವಾಲಯದ ಪ್ರಾಂಗಣ ಪ್ರವೇಶಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅರ್ಚಕ, ದೇಶದಲ್ಲಿ ಕೆಲ ಮೂಲಭೂತವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ಅಸಮಾನತೆ ಇದೆ ಎಂದು ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ಹೀಗೆ ವಿಷಬೀಜ ಬಿತ್ತುವವರಿಗೆ ನಿಜಾಂಶ ತಿಳಿಸಲು ಹಾಗೂ ಅವರು ತಮ್ಮ ಮನಸ್ಸಿನಲ್ಲಿರುವ ಕೊಳಕನ್ನು ತೊಲಗಿಸಲಿ ಎಂದು ದಲಿತ ಭಕ್ತರೊಬ್ಬರನ್ನು ಹೆಗಲ ಮೇಲೆ ಹೊತ್ತು ದೇವಾಲಯ ಪ್ರವೇಶಿಸಿ ಸೌಹಾರ್ದದ ಸಂದೇಶ ಸಾರಿದ್ದೇನೆ, ನಾವೆಲ್ಲರೂ ಒಂದಾಗಿ, ಮನುಷ್ಯರಂತೆ ಬದುಕಬೇಕು ಎಂಬುದೇ ನನ್ನ ಆಶಯ ಎಂದು ಅರ್ಚಕರು ತಿಳಿಸಿದ್ದಾರೆ. ಇನ್ನಾದರೂ ಕುತ್ಸಿತ ಮನಸ್ಸುಗಳು ದೇಶದಲ್ಲಿ ಅಸಮಾನತೆ ಇದೆ ಎಂದು ಬೊಬ್ಬೆ ಹಾಕುವುದನ್ನು ಬಿಟ್ಟು, ಒಂದಾಗಿ ಬಾಳಲು ಸಹಕಾರ ನೀಡಲಿ ಎಂಬುದೇ ನಮ್ಮ ಆಶಯವೂ ಆಗಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search