• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಾಹ್ಮಣ ವಿರೋಧಿಗಳೇ ಎಲ್ಲಿದ್ದೀರಿ, ಅರ್ಚಕರೊಬ್ಬರು ದಲಿತ ವ್ಯಕ್ತಿಯನ್ನು ದೇವಾಲಯದೊಳಗೆ ಹೊತ್ತೊಯ್ದಿದ್ದನ್ನು ನೋಡಿರಿ!

TNN Correspondent Posted On April 17, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಎಲ್ಲಾದರೂ ದಲಿತರ ಮೇಲೆ ಹಲ್ಲೆಯಾದರೆ, ಅನ್ಯಾಯವಾದರೆ ತುಂಬ ಜನ ಆರೋಪಿಗಳ ವಿರುದ್ಧ ಮಾತನಾಡದೆ ಬ್ರಾಹ್ಮಣರ ವಿರುದ್ಧ ಮಾತನಾಡುತ್ತಾರೆ. ಪುರೋಹಿತ ಶಾಹಿಯಿಂದಲೇ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಹೈದರಾಬಾದಿನಲ್ಲಿ ಬ್ರಾಹ್ಮಣ ಅರ್ಚಕರೊಬ್ಬರು ದಲಿತ ಭಕ್ತರೊಬ್ಬರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ದೇವಾಲಯ ಪ್ರವೇಶಿಸುವ ಮೂಲಕ ಭಕ್ತಿ, ದೇವರು, ದರ್ಶನ ಎಲ್ಲರಿಗೂ ಒಂದೇ ಎಂಬ ಸೌಹಾರ್ದಯುತ ಸಂದೇಶ ಸಾರುವ ಮೂಲಕ ಬ್ರಾಹ್ಮಣ ವಿರೋಧಿಗಳಿಗೆ ಸರಿಯಾದ ಚಾಟಿಯೇಟು ನೀಡಿದ್ದಾರೆ.

ಹೌದು, ಹೈದರಾಬಾದಿನ ಜಿಯಾಗುಡದ ಶ್ರೀ ರಂಗನಾಥ ದೇವಾಲಯದಲ್ಲಿ ಇಂಥದ್ದೊಂದು ಸೌಹಾರ್ದಯುತ ಸಂದೇಶ ಸಾರುವ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿಲ್ಕೂರ್ ಬಾಲಾಜಿ ದೇವಾಲಯದಲ್ಲಿ ಅರ್ಚಕರಾಗಿರುವ ಸಿ.ಎಸ್.ರಂಗರಾಜನ್ ಅವರು ದಲಿತ ಭಕ್ತ ಆದಿತ್ಯ ಪರಶ್ರೀ ಎಂಬುವವರ ಕೊರಳಿಗೆ ಹಾರ ಹಾಕಿ ದೇವಾಲಯದ ಪ್ರಾಂಗಣ ಪ್ರವೇಶಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅರ್ಚಕ, ದೇಶದಲ್ಲಿ ಕೆಲ ಮೂಲಭೂತವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ಅಸಮಾನತೆ ಇದೆ ಎಂದು ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ಹೀಗೆ ವಿಷಬೀಜ ಬಿತ್ತುವವರಿಗೆ ನಿಜಾಂಶ ತಿಳಿಸಲು ಹಾಗೂ ಅವರು ತಮ್ಮ ಮನಸ್ಸಿನಲ್ಲಿರುವ ಕೊಳಕನ್ನು ತೊಲಗಿಸಲಿ ಎಂದು ದಲಿತ ಭಕ್ತರೊಬ್ಬರನ್ನು ಹೆಗಲ ಮೇಲೆ ಹೊತ್ತು ದೇವಾಲಯ ಪ್ರವೇಶಿಸಿ ಸೌಹಾರ್ದದ ಸಂದೇಶ ಸಾರಿದ್ದೇನೆ, ನಾವೆಲ್ಲರೂ ಒಂದಾಗಿ, ಮನುಷ್ಯರಂತೆ ಬದುಕಬೇಕು ಎಂಬುದೇ ನನ್ನ ಆಶಯ ಎಂದು ಅರ್ಚಕರು ತಿಳಿಸಿದ್ದಾರೆ. ಇನ್ನಾದರೂ ಕುತ್ಸಿತ ಮನಸ್ಸುಗಳು ದೇಶದಲ್ಲಿ ಅಸಮಾನತೆ ಇದೆ ಎಂದು ಬೊಬ್ಬೆ ಹಾಕುವುದನ್ನು ಬಿಟ್ಟು, ಒಂದಾಗಿ ಬಾಳಲು ಸಹಕಾರ ನೀಡಲಿ ಎಂಬುದೇ ನಮ್ಮ ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search