• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಾಹ್ಮಣ ವಿರೋಧಿಗಳೇ ಎಲ್ಲಿದ್ದೀರಿ, ಅರ್ಚಕರೊಬ್ಬರು ದಲಿತ ವ್ಯಕ್ತಿಯನ್ನು ದೇವಾಲಯದೊಳಗೆ ಹೊತ್ತೊಯ್ದಿದ್ದನ್ನು ನೋಡಿರಿ!

TNN Correspondent Posted On April 17, 2018


  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಎಲ್ಲಾದರೂ ದಲಿತರ ಮೇಲೆ ಹಲ್ಲೆಯಾದರೆ, ಅನ್ಯಾಯವಾದರೆ ತುಂಬ ಜನ ಆರೋಪಿಗಳ ವಿರುದ್ಧ ಮಾತನಾಡದೆ ಬ್ರಾಹ್ಮಣರ ವಿರುದ್ಧ ಮಾತನಾಡುತ್ತಾರೆ. ಪುರೋಹಿತ ಶಾಹಿಯಿಂದಲೇ ದೇಶದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಹೈದರಾಬಾದಿನಲ್ಲಿ ಬ್ರಾಹ್ಮಣ ಅರ್ಚಕರೊಬ್ಬರು ದಲಿತ ಭಕ್ತರೊಬ್ಬರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ದೇವಾಲಯ ಪ್ರವೇಶಿಸುವ ಮೂಲಕ ಭಕ್ತಿ, ದೇವರು, ದರ್ಶನ ಎಲ್ಲರಿಗೂ ಒಂದೇ ಎಂಬ ಸೌಹಾರ್ದಯುತ ಸಂದೇಶ ಸಾರುವ ಮೂಲಕ ಬ್ರಾಹ್ಮಣ ವಿರೋಧಿಗಳಿಗೆ ಸರಿಯಾದ ಚಾಟಿಯೇಟು ನೀಡಿದ್ದಾರೆ.

ಹೌದು, ಹೈದರಾಬಾದಿನ ಜಿಯಾಗುಡದ ಶ್ರೀ ರಂಗನಾಥ ದೇವಾಲಯದಲ್ಲಿ ಇಂಥದ್ದೊಂದು ಸೌಹಾರ್ದಯುತ ಸಂದೇಶ ಸಾರುವ ಘಟನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿಲ್ಕೂರ್ ಬಾಲಾಜಿ ದೇವಾಲಯದಲ್ಲಿ ಅರ್ಚಕರಾಗಿರುವ ಸಿ.ಎಸ್.ರಂಗರಾಜನ್ ಅವರು ದಲಿತ ಭಕ್ತ ಆದಿತ್ಯ ಪರಶ್ರೀ ಎಂಬುವವರ ಕೊರಳಿಗೆ ಹಾರ ಹಾಕಿ ದೇವಾಲಯದ ಪ್ರಾಂಗಣ ಪ್ರವೇಶಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅರ್ಚಕ, ದೇಶದಲ್ಲಿ ಕೆಲ ಮೂಲಭೂತವಾದಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ಅಸಮಾನತೆ ಇದೆ ಎಂದು ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ಹೀಗೆ ವಿಷಬೀಜ ಬಿತ್ತುವವರಿಗೆ ನಿಜಾಂಶ ತಿಳಿಸಲು ಹಾಗೂ ಅವರು ತಮ್ಮ ಮನಸ್ಸಿನಲ್ಲಿರುವ ಕೊಳಕನ್ನು ತೊಲಗಿಸಲಿ ಎಂದು ದಲಿತ ಭಕ್ತರೊಬ್ಬರನ್ನು ಹೆಗಲ ಮೇಲೆ ಹೊತ್ತು ದೇವಾಲಯ ಪ್ರವೇಶಿಸಿ ಸೌಹಾರ್ದದ ಸಂದೇಶ ಸಾರಿದ್ದೇನೆ, ನಾವೆಲ್ಲರೂ ಒಂದಾಗಿ, ಮನುಷ್ಯರಂತೆ ಬದುಕಬೇಕು ಎಂಬುದೇ ನನ್ನ ಆಶಯ ಎಂದು ಅರ್ಚಕರು ತಿಳಿಸಿದ್ದಾರೆ. ಇನ್ನಾದರೂ ಕುತ್ಸಿತ ಮನಸ್ಸುಗಳು ದೇಶದಲ್ಲಿ ಅಸಮಾನತೆ ಇದೆ ಎಂದು ಬೊಬ್ಬೆ ಹಾಕುವುದನ್ನು ಬಿಟ್ಟು, ಒಂದಾಗಿ ಬಾಳಲು ಸಹಕಾರ ನೀಡಲಿ ಎಂಬುದೇ ನಮ್ಮ ಆಶಯವೂ ಆಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search