• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಧಿಕಾರ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಕೇಜ್ರಿವಾಲ್ ಸರ್ಕಾರ ಹೇಗೆ ತಪರಾಕಿ ನೋಡಿ!

TNN Correspondent Posted On April 18, 2018


  • Share On Facebook
  • Tweet It

ದೆಹಲಿ: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇತ್ತೀಚೆಗಷ್ಟೇ ಶಾಸಕರ ಅಮಾನತುಗೊಳಿಸಿದ್ದು ನುಂಗಲಾರದ ತುತ್ತಾಗಿತ್ತು. ಈ ನೋವು ಮರೆಮಾಚುವ ಮುನ್ನವೇ ಈಗ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದೆ.

ಹೌದು, ಕೇಂದ್ರ ಸರ್ಕಾರದ ಶಿಫಾರಸು ಮೇರೆಗೆ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ದೆಹಲಿ ಸರ್ಕಾರದ ಹಲವು ಸಚಿವರಿಗೆ ನೇಮಿಸಲಾಗಿದ್ದ ಸಲಹೆಗಾರರ ನೇಮಕ ರದ್ದುಗೊಳಿಸಿದೆ.

ಅಮರ್ ದೀಪ್ ತಿವೇರಿ, ಅರುಣೋದಯ್ ಪ್ರಕಾಶ್, ಆತಿಶಿ ಮರ್ಲೇನಾ, ದಿನಕರ್ ಆದಿಬ್, ರಾಮ್ ಕುಮಾರ್ ಝಾ, ಸಮೀರ್ ಮಲ್ಹೋತ್ರಾ, ರಾಘವ್ ಚಂದಾ, ಪ್ರಶಾಂತ್ ಸಕ್ಸೇನಾ ಸೇರಿ ಹಲವು ಸಲಹೆಗಾರರ ನೇಮಕವನ್ನು ಸಾಮಾನ್ಯ ಆಡಳಿತ ವಿಭಾಗ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹಾಗೂ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಬರದ ಕಾರ್ಯವನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸಲಹೆಗಾರರ ನೇಮಕವನ್ನು ರದ್ದುಗೊಳಿಸಲಾಗಿದೆ.

ನೇಮಕ ರದ್ದಾದವರಲ್ಲಿ ಇಬ್ಬರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಇದ್ದರು ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಸದಾ ಒಂದಿಲ್ಲೊಂದು ಅಚಾತುರ್ಯ ಹೇಳಿಕೆ, ವಿವಾದ, ಸದಾ ಸುದ್ದಿಯಲ್ಲಿರಲು ಬಯಸುವ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ನಡೆಯಿಂದ ಮುಖಭಂಗವಾದಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search